ಕೂಡಲೇ ರೈಲ ಸಂಚಾರ ಆರಂಭಿಸಲು ಮನವಿ
Request to start train services immediately
ಕೂಡಲೇ ರೈಲ ಸಂಚಾರ ಆರಂಭಿಸಲು ಮನವಿ
ಹೊಸಪೇಟೆ 15: ನೈರುತ್ಯ ರೈಲ್ವೇ ಬಳಕೆದಾರರ ಹಿರಿಯ ಸಲಹಾ ಸಮಿತಿಯ ಹಿರಿಯ ಸದಸ್ಯರಾದ ಬಾಬುಲಾಲ್ ಜೈನ್ ಅವರ ನೇತೃತ್ವದಲ್ಲಿ ವಿಜಯನಗರ ರೈಲ್ವೇ ಬಳಕೆದಾರರ ಸಂಘದ ಪದಾಧಿಕಾರಿಗಳೂ 14 ರಂದು ನಗರದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಈ ಭಾಗದ ರೈಲ್ವೇ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿತು. ಹೊಸಪೇಟೆ, ಬಳ್ಳಾರಿ, ಕೊಟ್ಟೂರು ಮಾರ್ಗವಾಗಿ ಮಂಗಳೂರಿಗೆ ನೇರ ರೈಲು ಸಂಪರ್ಕ ಕಲ್ಪಿಸಬೇಕು ಇದರಿಂದ ಹಂಪಿ, ಬೇಲೂರು, ಹಳೇ ಬೀಡು, ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶ್ರವಣಬೆಳಗೋಳ, ಮಣಿಪಾಲ, ಉಡುಪಿ, ಮಂಗಳೂರಿಗೆ ಸಂಪರ್ಕ ದೊರೆಯುತ್ತದೆ. ಅಲ್ಲದೇ ಕರಾವಳಿ ಮಲೆನಾಡು ಜಿಲ್ಲೆಗಳಿಂದ ಕಲ್ಯಾಣ ಕರ್ನಾಟಕ ಜಿಲ್ಲೆಗಳ ನಡುವೆ ವ್ಯಾಪಾರ ವಾಣಿಜ್ಯ ವಹಿವಾಟುಗಳು ವೃದ್ದಿಯಾಗುತ್ತವೆ. ಪ್ರವಾಸೋದ್ಯಮಕ್ಕೂ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ವೈ.ಯಮುನೇಶ್, ಮಹೇಶ್ ಕುಡುತಿನಿ, ಉಮಾಮಹೇಶ್ವರ್, ಯು.ಆಂಜನೇಯಲು, ಎಂ.ರಂಗನಾಥ, ಅರವಿಂದ ಜಾಲಿ, ರಾಮನಮಲಿ, ಶಾಂತಪ್ಪ, ಎಂ.ರಾಜಶೇಖರ್, ಜಗದೀಶ್, ನಜೀರ್ ಸಾಬ್, ಜೆ.ವರುಣ್, ದೀಪಕ್ ಉಳ್ಳಿ, ಟಿ.ಎಂ.ತಿಪ್ಪೇಸ್ವಾಮಿ, ಶಿವಕುಮಾರ್, ಇನ್ನು ಮುಂತಾದವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 