ಕೂಡಲೇ ರೈಲ ಸಂಚಾರ ಆರಂಭಿಸಲು ಮನವಿ
Request to start train services immediately
ಕೂಡಲೇ ರೈಲ ಸಂಚಾರ ಆರಂಭಿಸಲು ಮನವಿ
ಹೊಸಪೇಟೆ 15: ನೈರುತ್ಯ ರೈಲ್ವೇ ಬಳಕೆದಾರರ ಹಿರಿಯ ಸಲಹಾ ಸಮಿತಿಯ ಹಿರಿಯ ಸದಸ್ಯರಾದ ಬಾಬುಲಾಲ್ ಜೈನ್ ಅವರ ನೇತೃತ್ವದಲ್ಲಿ ವಿಜಯನಗರ ರೈಲ್ವೇ ಬಳಕೆದಾರರ ಸಂಘದ ಪದಾಧಿಕಾರಿಗಳೂ 14 ರಂದು ನಗರದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಈ ಭಾಗದ ರೈಲ್ವೇ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿತು. ಹೊಸಪೇಟೆ, ಬಳ್ಳಾರಿ, ಕೊಟ್ಟೂರು ಮಾರ್ಗವಾಗಿ ಮಂಗಳೂರಿಗೆ ನೇರ ರೈಲು ಸಂಪರ್ಕ ಕಲ್ಪಿಸಬೇಕು ಇದರಿಂದ ಹಂಪಿ, ಬೇಲೂರು, ಹಳೇ ಬೀಡು, ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶ್ರವಣಬೆಳಗೋಳ, ಮಣಿಪಾಲ, ಉಡುಪಿ, ಮಂಗಳೂರಿಗೆ ಸಂಪರ್ಕ ದೊರೆಯುತ್ತದೆ. ಅಲ್ಲದೇ ಕರಾವಳಿ ಮಲೆನಾಡು ಜಿಲ್ಲೆಗಳಿಂದ ಕಲ್ಯಾಣ ಕರ್ನಾಟಕ ಜಿಲ್ಲೆಗಳ ನಡುವೆ ವ್ಯಾಪಾರ ವಾಣಿಜ್ಯ ವಹಿವಾಟುಗಳು ವೃದ್ದಿಯಾಗುತ್ತವೆ. ಪ್ರವಾಸೋದ್ಯಮಕ್ಕೂ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ವೈ.ಯಮುನೇಶ್, ಮಹೇಶ್ ಕುಡುತಿನಿ, ಉಮಾಮಹೇಶ್ವರ್, ಯು.ಆಂಜನೇಯಲು, ಎಂ.ರಂಗನಾಥ, ಅರವಿಂದ ಜಾಲಿ, ರಾಮನಮಲಿ, ಶಾಂತಪ್ಪ, ಎಂ.ರಾಜಶೇಖರ್, ಜಗದೀಶ್, ನಜೀರ್ ಸಾಬ್, ಜೆ.ವರುಣ್, ದೀಪಕ್ ಉಳ್ಳಿ, ಟಿ.ಎಂ.ತಿಪ್ಪೇಸ್ವಾಮಿ, ಶಿವಕುಮಾರ್, ಇನ್ನು ಮುಂತಾದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 