ದಲಿತರ ಕುಂದು ಕೊರತೆ ಸಭೆ ನಡೆಸಲು ತಹಶೀಲ್ದಾರ್ ಗೆ ಮನವಿ

ದಲಿತರ ಕುಂದು ಕೊರತೆ ಸಭೆ ನಡೆಸಲು ತಹಶೀಲ್ದಾರ್ ಗೆ ಮನವಿ  Request to the Tahsildar to hold a meeting on the grievances of Dalits


ತಾಳಿಕೋಟಿ 06 : ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ ಹಾಗೂ ತಾಳಿಕೋಟಿ ಅಂಬೇಡ್ಕರ್ ಸೇನೆ ಕಾರ್ಮಿಕ ಘಟಕದ ಅಧ್ಯಕ್ಷ ಪರಶುರಾಮ ನಾಲತವಾಡ ಅವರು ತಹಶೀಲ್ದಾರ್ ಡಾ.ವಿನಯಾ ಹೂಗಾರ ಅವರಿಗೆ ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ ತಾಳಿಕೋಟಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ದಲಿತ ಸಮುದಾಯ ಜನರ ಸ್ಮಶಾನ ಸಮಸ್ಯೆ, ಅಸ್ಪೃಶ್ಯತೆ ಆಚರಣೆ ಹಾಗೂ ದಲಿತ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಇದ್ದು ಇವುಗಳನ್ನು ಪರಿಹರಿಸುವ ಅಗತ್ಯವಿದೆ ಈ ಕಾರಣಕ್ಕಾಗಿ ತಾಲೂಕ ಆಡಳಿತ ಆದಷ್ಟು ಬೇಗ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಬೇಕೆಂದು ಕೋರಲಾಗಿದೆ.