ಸೌರ ಕೃಷಿ ಯೋಜನೆಗೆ ಭದ್ದತೆ : ಖಾದ್ರಿ
Responsibility for solar farming project: Qadri
ಶಿಗ್ಗಾವಿ 07 : ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸೌರ ಕೃಷಿ ಯೋಜನೆ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಹೆಸ್ಕಾಂ ಅಧ್ಯಕ್ಷರಾದ ಸೈಯದ್ ಅಜೀಮ್ಪೀರ್ ಎಸ್ ಖಾದ್ರಿ ಅವರು ಹೇಳಿದ್ದಾರೆ. 2026-27ನೇ ಸಾಲಿನಲ್ಲಿ 100 ಹೊಸ ಉಪ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಘೋಷಿಸುವ ಮೂಲಕ ಎಲ್ಲರಿಗೂ ಸಮರ್ಕ ವಿದ್ಯುತ್ ಪೂರೈಕೆಯನ್ನು ಸಾಕಾರಗೊಳಿಸಲು ದೃಢ ಹೆಜ್ಜೆ ಇಟ್ಟಿದ್ದಾರೆ. ಅದೇ ರೀತಿ ಬೇಡಿಕೆ ಅವಧಿಯಲ್ಲಿ ವಿದ್ಯುತ್ ಪೂರೈಸಲು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದನೆಯಾದ ವಿದ್ಯುತ್ತನ್ನು ಸಂಗ್ರಹಿಸಲು ಅನುಕೂಲವಾಗುವಂತೆ 2,000 ಮೆಗಾವ್ಯಾಟ್ ಪರ್ ಅವರ್ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ ಯೋಜನೆಗೆ ಅಂದಾಜು 3,400 ಕೋಟಿ ರೂ. ಹೂಡಿಕೆಗೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 