ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಪರಿಶೀಲನೆ
ಗದಗ 14: ಅಮೃತ ಯೋಜನೆಯಡಿ ಕೇಂದ್ರ ರಾಜ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನಡೆಸಲಾಗುವ ಗದುಗಿನ ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು (ದಿ.14) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗದಗ ಬೇಟಗೇರಿ ನಗರಸಭೆ ಪೌರಾಯುಕ್ತ ದೀಪಕ ಹರಡಿ ಅಮೃತ ಯೋಜನೆಯಡಿ ಒಟ್ಟು 9.56 ಕೋಟಿ ವೆಚ್ಚದ ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು. ಗದಗ ಬೆಟಗೇರಿ ನಗರಸಭೆ ಅಭಿಯಂತರುಗಳಾದ ಎಲ್. ಜಿ. ಪತ್ತಾರ, ಎಚ್. ಎ. ಬಂಡಿವಡ್ಡರ ಇದ್ದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಗದಗ ಬೇಟಗೇರಿ ನಗರಸಭೆ ಕಾಯರ್ಾಲಯ ಅನಿರೀಕ್ಷಿತವಾಗಿ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಸೇರಿದಂತೆ ವಿವಿಧ ವಿಷಯಗಳ ಪರಿಶೀಲನೆ ನಡೆಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 