ಮಂಗಸೂಳಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಕುಸ್ತಿ ಪಂದ್ಯಾವಳಿಗಳಿಗೆ ಶ್ರೀಮಂತ ಪಾಟೀಲ ಚಾಲನೆ..!
Rich Patil inaugurates wrestling tournaments on the occasion of Chhatrapati Shivaji Maharaj's Jayan
ಕಾಗವಾಡ 19: ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ಹಿಂದೂ ಹೃದಯ ಸಾಮ್ರಾಟ, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ಯ ಬುಧವಾರ ದಿ. 18 ರಂದು ಭವ್ಯ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು.
ಕುಸ್ತಿ ಪಂದ್ಯಾವಳಿಯನ್ನು ಮಾಜಿ ಸಚಿವರು ಹಾಗೂ ಅಥಣಿ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟಿಲ ಅವರು ಸ್ಥಳೀಯ ಗಣ್ಯರೊಂದಿಗೆ ಕುಸ್ತಿ ಮೈದಾನಕ್ಕೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸಿ, ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿದರು.
ಶ್ರೀಮಂತ ಪಾಟೀಲ ಅವರು ಈ ಪಂದ್ಯಾವಳಿಗೆ ತಮ್ಮ ಶ್ರೀಮಂತ ಪಾಟೀಲ ಫೌಂಡೇಶನ್ ವತಿಯಿಂದ ಸಹಾಯಧನ ನೀಡಿದ್ದು, ಕುಸ್ತಿ ಕಮಿಟಿಯ ಸದಸ್ಯರು ಅವರನ್ನು ಇದೇ ವೇಳೆ ಸತ್ಕರಿಸಿದರು.
ಈ ಸಮಯದಲ್ಲಿ ಮುಖಂಡರಾದ ದಿಗ್ವಿಜಯ ಪವಾರ-ದೇಸಾಯಿ, ಅಶೋಕರಾವ ಪೋಲಿಸ-ಪಾಟೀಲ, ರವೀಂದ್ರ ಪೂಜಾರಿ, ದಾದಾಗೌಡ ಪಾಟೀಲ, ಸಂಭಾಜಿ ಪಾಟೀಲ, ಬಾಬಾಸಾಬ ಪಾಟಿಲ, ಮೆಹಬೂಬ ಮುಲ್ಲಾ ಸೇರಿದಂತೆ ಹಲವಾರು ಮುಖಂಡರು, ಗ್ರಾಮದ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 