ಬಸ್ಸ ಡಿಪೋದ ಅವರಣದಲ್ಲಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ: ಪಿಎಸ್ಐ ಆರೀಫ ಮುಶಾಪೀರ
Road Safety Week program held at Bus Depot Avarana: PSI Areefa Mushapira
ಬಸ್ಸ ಡಿಪೋದ ಅವರಣದಲ್ಲಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ: ಪಿಎಸ್ಐ ಆರೀಫ ಮುಶಾಪೀರ
ಸಿಂದಗಿ 20: ವಾಹನ ಚಾಲಕರು ಮತ್ತು ಪಾದಾಚಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಉತ್ತಮ ಶಿಸ್ತು ಮತ್ತು ಜ್ಞಾನ ಬೆಳಿಸಿಕೊಳ್ಳಬೇಕು ಶಿಸ್ತಿನ ಸಂಚಾರ, ಸುಗಮ ಸಂಚಾರಕ್ಕೆ ಹಾದಿ ಎಂಬುದನ್ನು ತಿಳಿದಿರಬೇಕು ಇಲ್ಲವಾದಲ್ಲಿ ಅಪಾಯಕಾರಿ ಎಂದು ಪಿಎಸ್ಐ ಆರೀಫ ಮುಶಾಪೀರ ಹೇಳಿದರು.
ಪಟ್ಟಣದ ಬಸ್ಸ ಡಿಪೋದ ಅವರಣದಲ್ಲಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ರಸ್ತೆ ಅಪಘಾತಗಳ ಸಂಖ್ಯೆ ದಿನೆ ದಿನೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನರಲ್ಲಿ ರಸ್ತೆ ಸುರಕ್ಷತೆಯ ಜಾಗೃತಿ ಮೂಡಿಸಲು ಇಡೀ ದೇಶಾದ್ಯಂತ ಒಂದು ವಾರದ ಕಾಲ ರಸ್ತೆ ಸುರಕ್ಷತಾ ಸಪ್ತಾಹ ನಡೆಯಲಿದೆ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ವಾಹನ ಚಾಲಕರಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನಸಾಮಾನ್ಯರಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವುದು ರಸ್ತೆ ಅಪಘಾತ, ಸಾವು ನೋವುಗಳ ಬಗ್ಗೆ ಅವರ ಗಮನಕ್ಕೆ ತರುವುದು ಹಾಗೂ ರಸ್ತೆ ನಿಯಮಗಳನ್ನು ಪಾಲಿಸುವಂತೆ ಪ್ರತಿಯೊಬ್ಬರಲ್ಲಿ ಶಿಸ್ತು ಮೂಡಿಸುವುದು ಇದರ ಉದ್ದೇಶವಾಗಿದೆ ನೆಮದಿಯ ಬಾಳಿಗೆ ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ ಎಂಬುದು ಈ ಸಪ್ತಾಹದ ಪ್ರಮುಖ ವಿಷಯ ಇದರಲ್ಲಿ ಪ್ರಮುಖವಾಗಿ ರಸ್ತೆ ಅಪಘಾತಗಳು, ಸಾರ್ವಜನಿಕರಿಗೆ ಸಂಚಾರ ಸುರಕ್ಷತಾ ಸೂಚನೆಗಳು, ರಸ್ತೆ ಅಪಘಾತ ನಿಯಂತ್ರಣ, ರಸ್ತೆ ಸುರಕ್ಷೆ ಮತ್ತು ಜೀವನ ರಕ್ಷೆ ಎಂದರು.
ಘಟಕ ವ್ಯವಸ್ಥಾಪಕ ರೇವಣಸಿದ್ದಪ್ಪ ಖೈನೂರ ಮಾತನಾಡಿ, ವಾಹನ ಚಾಲಕರು ಏನು ಮಾಡಬೇಕು, ಮಕ್ಕಳು ಏನು ಮಾಡಬೇಕು, ಪಾದಚಾರಿ ಹೇಗೆ ಸಂಚರಿಸಬೇಕು ಸಂಚಾರಿ ಗೆರೆಗಳು, ಸಂಚಾರದ ಸಂಕೇತಗಳು, ಸುಗಮ ಸಂಚಾರಕ್ಕೆ ಸುಲಭ ಉಪಾಯಗಳು, ಕಡ್ಡಾಯವಾಗಿ ಪಾಲಿಸಬೇಕಾದ ಚಿನ್ಹೆಗಳು, ಕಾಲು ನಡಿಗೆಯ ಸುರಕ್ಷಿತ ದಾರಿ, ಸಿಗ್ನಲ್ನಲ್ಲಿ ಆಗುವ ಅಪಘಾತ ಸೇರಿದಂತೆ ಇತರೆ ಪ್ರಮುಖ ವಿಷಯಗಳ ಬಗ್ಗೆ ಚಾಲಕರು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾದೇವ ಹೂವಿನಹಳ್ಳಿ, ಸಂತೋಷ ಹತ್ತರಕಿ, ಎಂ.ಎಸ್.ಡೋರನಳ್ಳಿ, ಅರವಿಂದ ತರಡಿ ಸೇರಿದಂತೆ ಅನೇಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 