ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Road development works launched
ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಕಾಗವಾಡ 17: ಕ್ಷೇತ್ರದಲ್ಲಿ ಪ್ರವಾಹ ಪೀಡಿತ ಗ್ರಾಮಗಳ ವೀಕ್ಷಣೆಗೆ ಮುಖ್ಯಮಂತ್ರಿಗಳು ಬಂದಾಗ ಸಂಪರ್ಕ ಕಡಿತಗೊಳ್ಳುವ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕೇಳಲಾಗಿ ಮುಖ್ಯಮಂತ್ರಿಗಳು ಈಗ 10 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ್ದು ,ಪ್ರವಾಹ ಸಂದರ್ಭದಲ್ಲಿ ಜನಜಾನುವಾರುಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ರಾಜು ಕಾಗೆ ಹೇಳಿದರು.ಅವರು ಶುಕ್ರವಾರ ಮತಕ್ಷೇತ್ರದ ಉಗಾರ ಖುರ್ದ ಪುರಸಭೆ ವ್ಯಾಪ್ತಿಯ ಒಂದು ಕೋಟಿ ರೂಪಾಯಿ ಅನುದಾನದಲ್ಲಿ ಉಗಾರ ಐನಾಪೂರ ಬಾರಿಗಡ್ಡೆ ರಸ್ತೆ ಮತ್ತು ಕೃಷ್ಣಾ ಕಿತ್ತೂರದಲ್ಲಿ ಎರಡು ಕೋಟಿ ರೂಪಾಯಿ ಅನುದಾನದ ಜಾಕವೆಲ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಮಾತನಾಡುತ್ತಿದ್ದರು.ಅವರು ಮುಂದೆ ಮಾತನಾಡುತ್ತಾ,ಸುಮಾರು ವರ್ಷಗಳಿಂದ ಈ ಎರಡೂ ರಸ್ತೆ ಅಭಿವೃದ್ಧಿಗೆ ಇಲ್ಲಿಯ ಸಾರ್ವಜನಿಕರ ಬೇಡಿಕೆಯನ್ನು ಈಗ ಪೂರೈಸಲಾಗಿದ್ದು,ಇದರಿಂದ ಇಲ್ಲಿಯ ಕುಟುಂಬಗಳಿಗೆ ತಮ್ಮ ದೈನಂದಿನ ಕೆಲಸ ಕಾರ್ಯ ಹಾಗೂ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಪ್ರಯೋಜನವಾಗಲಿದೆ ಎಂದರು.ಈ ವೇಳೆ ತಾಪಂ ಇಒ ವೀರಣ್ಣಾ ವಾಲಿ,ವಿನಾಯಕ ಕಾಂಬ್ಳೆ,ಸಂಜು ಸಲಗರೆ,ಗ್ರಾಪಂ ಮಾಜಿ ಅಧ್ಯಕ್ಷ ರಾಜೇಂದ್ರ ಕಾಂಬಳೆ,ವಕೀಲ ರಾಹುಲ ಕಟಗೇರಿ,ಪ್ರೇಮ ಬಾಳೊಜಿ,ಅಜಿತ ಕಟಗೇರಿ,ಯಲ್ಲಪ್ಪ ಗಸ್ತಿ,ಕೃಷ್ಣಾ ಸಕ್ಕರೆ ಕಾರ್ಖಾನೆ ನಿರ್ದೆಶಕ ವಿಶ್ವನಾಥ ಪಾಟೀಲ್,ಯಮನಪ್ಪ ಪಾಟೀಲ್, ವಿಧ್ಯಾಧರ ಸುತಾರ,ಅಶೋಕ ಇಚಲಕರಂಜಿ,ಸೇರಿದಂತೆ ಅನೇಕರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 