ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ

ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ Road improvement works launched

ರಾಯಬಾಗ 28 : ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳ ತೋಟದ ರಸ್ತೆಗಳನ್ನು ಸುಧಾರಿಸುವುದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು. ಶನಿವಾರ ತಾಲೂಕಿನ ಮೇಖಳಿ ಗ್ರಾಮದಲ್ಲಿ ಜಿ.ಪಂ.ಇಲಾಖೆಯಿಂದ ಮಂಜೂರಾದ 20 ಲಕ್ಷ ರೂ. ಅನುದಾನದಲ್ಲಿ ಮೇಖಳಿ ಮುಖ್ಯ ರಸ್ತೆಯಿಂದ ಜಾನ್ವೇಕರ್ ತೋಟದ ರಸ್ತೆ ಸುಧಾರಣೆ ಹಾಗೂ 20 ಲಕ್ಷ ರೂ.ಅನುದಾನದಲ್ಲಿ ಮೇಖಳಿ-ನಾಗರಮುನ್ನೋಳ್ಳಿ ರಸ್ತೆಯಿಂದ ಮುತಾರೆ ತೋಟದ ಸರ್ಕಾರಿ ಶಾಲೆವರೆಗೆ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತೋಟದ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಹೋಗುವ ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ. ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಿಸಬೇಕೆಂದು ಸೂಚಿಸಿದರು. ಜೆಇ ರಾಕೇಶ ಕಟ್ಟೀಮನಿ, ಸದಾಶಿವ ಫೋರೆ​‍್ಡ, ಸಂಗಣ್ಣ ದತ್ತವಾಡೆ, ಪಿ.ಎ.ನಾಯಿಕ, ಕುಮಾರ ಮರಭೀಮಗೋಳ, ಸಾತಪ್ಪ ಮುತಾರೆ, ಬೀರು ನಾಯಿಕ, ಭೀಮಶಿ ಸುತಾರ, ಮಹೇಶ ಮುತಾರೆ, ಭೀಮಸೇನ ಮುತಾರೆ, ರಾಜು ನಾಯಿಕ, ಮಂಜು ಮುತಾರೆ ಸೇರಿ ಅನೇಕರು ಇದ್ದರು.