ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ
Road improvement works launched
ರಾಯಬಾಗ 28 : ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳ ತೋಟದ ರಸ್ತೆಗಳನ್ನು ಸುಧಾರಿಸುವುದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಶನಿವಾರ ತಾಲೂಕಿನ ಮೇಖಳಿ ಗ್ರಾಮದಲ್ಲಿ ಜಿ.ಪಂ.ಇಲಾಖೆಯಿಂದ ಮಂಜೂರಾದ 20 ಲಕ್ಷ ರೂ. ಅನುದಾನದಲ್ಲಿ ಮೇಖಳಿ ಮುಖ್ಯ ರಸ್ತೆಯಿಂದ ಜಾನ್ವೇಕರ್ ತೋಟದ ರಸ್ತೆ ಸುಧಾರಣೆ ಹಾಗೂ 20 ಲಕ್ಷ ರೂ.ಅನುದಾನದಲ್ಲಿ ಮೇಖಳಿ-ನಾಗರಮುನ್ನೋಳ್ಳಿ ರಸ್ತೆಯಿಂದ ಮುತಾರೆ ತೋಟದ ಸರ್ಕಾರಿ ಶಾಲೆವರೆಗೆ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತೋಟದ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಹೋಗುವ ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ. ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಿಸಬೇಕೆಂದು ಸೂಚಿಸಿದರು. ಜೆಇ ರಾಕೇಶ ಕಟ್ಟೀಮನಿ, ಸದಾಶಿವ ಫೋರೆ್ಡ, ಸಂಗಣ್ಣ ದತ್ತವಾಡೆ, ಪಿ.ಎ.ನಾಯಿಕ, ಕುಮಾರ ಮರಭೀಮಗೋಳ, ಸಾತಪ್ಪ ಮುತಾರೆ, ಬೀರು ನಾಯಿಕ, ಭೀಮಶಿ ಸುತಾರ, ಮಹೇಶ ಮುತಾರೆ, ಭೀಮಸೇನ ಮುತಾರೆ, ರಾಜು ನಾಯಿಕ, ಮಂಜು ಮುತಾರೆ ಸೇರಿ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 