ರಾಕ್ ಗಾರ್ಡನ್: ಗ್ರಾಮೀಣ ಸಾಮ್ರಾಜ್ಯದ ಅದ್ಭುತ ಪರಿಚಯ
ಲೋಕದರ್ಶನ ವರದಿ
ಶಿಗ್ಗಾವಿ12: ಇಂದಿನ ಪೀಳಿಗೆಗೆ ಗ್ರಾಮೀಣ ಬದುಕಿನ ಪರಿಚಯ ಮಾಡಿಸಬೇಕಾದರೆ ಒಮ್ಮೆ ' ಉತ್ಸವ ರಾಕ್ ಗಾರ್ಡನ್ಗೆ ಹೆತ್ತವರು ಕರೆದುಕೊಂಡು ಹೋಗಬೇಕು ಎಂದು ಬೆಂಗಳೂರು ನಗರ್ತ ಮಹಿಳಾ ಸಂಘಧ ಅಧ್ಯಕ್ಷೆ ಇಂದಿರಾ ಬಸವರಾಜ ಹೇಳಿದರು.
ಗೊಟಗೋಡಿಯ ರಾಕ್ ಗಾರ್ಡನ್ ಹಾಗೂ ಇಂಡಿಯನ್ ಗಾರ್ಡನ್ಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭ ಮಾತನಾಡಿದ ಅವರು ಇಲ್ಲಿನ ಸಹಸ್ರಾರು ಶಿಲ್ಪಗಳು ವಿಶಿಷ್ಟ ಸಂದೇಶ ನೀಡುತ್ತವೆ. ಅಲ್ಲದೇ ಗ್ರಾಮೀಣ ಸಾಮ್ರಾಜ್ಯದ ಅದ್ಭುತ ಪರಿಚಯ ನೀಡುತ್ತವೆ ಎಂದ ವಿವರಿಸಿದ ಅವರು, ಇದು ಅಕ್ಷರಶ: ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಪ್ರವಾಸಿ ಕೇಂದ್ರ ಎಂದು ಅಭಿಪ್ರಾಯಪಟ್ಟರು.
ರಾಕ್ ಗಾರ್ಡನ್ನ ಅನುಭವ ಸ್ಮರಣೀಯವಾದುದು ಎಂದ ಸಂಘದ ಮಾಜಿ ಅಧ್ಯಕ್ಷೆ ಶೈಲಜಾ ಉದಯಶಂಕರ್, ಇಂಡಿಯನ್ ಗಾರ್ಡನ್ನ ಸಾಹಸಮಯ ಆಟಗಳು, ಮಳೆ ಸ್ನಾನ, ಎತ್ತಿನ ಗಾಡಿ-ಟಾಂಗಾ ಸವಾರಿ,ದೋಣಿ ವಿಹಾರ ಹಾಗೂ ನೀರಿನ ಆಟಗಳು ನಮ್ಮನ್ನು ಭರಪೂರ ರಂಜಿಸಿದವು ಎಂದರು.
ಶಿಲ್ಪಗಳ ರೂಪದಲ್ಲಿರುವ ಗ್ಯಾಲರಿಗಳನ್ನು ನೋಡಿದ ನಮ್ಮ ಸದಸ್ಯರು, ಒಂದು ಕ್ಷಣ ಹೌಹಾರಿದರಲ್ಲದೆ, ಅವುಗಳನ್ನು ಮುಟ್ಟಿ ನೋಡುವ ಇಂಗಿತ ವ್ಯಕ್ತಪಡಿಸಿದರು ಎಂದು ಹೇಳಿದರು. ಇಲ್ಲಿ ಗಾಂಧೀಜಿಯವರ ಸುಭೀಕ್ಷ ಗ್ರಾಮೀಣ ಸಾಮ್ರಾಜ್ಯದ ಕನಸು ನನಸಾಗಿದೆ ಎನ್ನುವಷ್ಟರ ಮಟ್ಟಿಗೆ ಶಿಲ್ಪಗಳು ನೈಜತೆ ಹೊಂದಿವೆ ಎಂದು ಎಲ್ಲ ಸದಸ್ಯರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 