ಕೋವಿಡ್-19 ಜಾಗೃತಿ ಅಭಿಯಾನಕ್ಕೆ ಚಾಲನೆ
ಬಾಗಲಕೋಟೆ: ಕಾಮರ್ಿಕ ಇಲಾಖೆ, ಇಂಡಿಯನ್ ರೆಡ್ಕ್ರಾಸ್ ಸಂಸ್ಥೆ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕೋವಿಡ್-19 ಸೋಂಕು ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ ಜಂಟಿಯಾಗಿ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಶುಕ್ರವಾರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿ.ಪಂ ಸಿಇಓ ಗಂಗೂಬಾಯಿ ಮಾನಕರು ಅವರು ಆರು ವಾಹನಗಳ ಮೂಲಕ ಜಿಲ್ಲೆಯಾದ್ಯಂತ ಸಂಚರಿಸುವ ಮೂಲಕ ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ರೋಗ ಹರಡದಂತೆ ಮುಂಜಾಗ್ರತಾ ಕ್ರಮ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಹಾಗೂ ಸ್ವಚ್ಛತೆ ಬಗ್ಗೆ ಧ್ವನಿವರ್ಧಕ ಮತ್ತು ಜಾಗೃತಿಯ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಿದ್ದಾರೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ವಾತರ್ಾಧಿಕಾರಿ ಮಂಜುನಾಥ ಸುಳ್ಳೊಳ್ಳಿ, ನಗರಸಭೆ ಪೌರಾಯುಕ್ತ ಮುನಿಶಾಮಪ್ಪ, ಜಿಲ್ಲಾ ಕಾಮರ್ಿಕ ಅಧಿಕಾರಿ ಬಿ.ಆರ್.ಜಾದವ, ಭಾರತೀಯ ರೆಡ್ ಕ್ರಾಸ್ನ ಆನಂದ ಜಿಗಜಿನ್ನಿ, ವೀರಣ್ಣ ಅಥಣಿ, ರವಿ ಕುಮಟಗಿ, ಪ್ರವೀಣ ಹಿರೇಕುಂಬಿ, ಸಿ.ಬಿ.ಸೋಲಾಪೂರ, ವಿನೋದ ಪಾಗದ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 