ಹಳೆಕೋಟಿ ಕಾಲೋನಿ ವಾಸಿಗಳಿಗೆ ಪಟ್ಟಾ,ಪಹಣಿ ನೀಡಲು ರೂಪಾಲಿ ನಾಯ್ಕ ಜಿಲ್ಲಾಧಿಕಾರಿಗೆ ಮನವಿ
Rupali Nayka appeals to the District Collector to give Patta, Pahani to the residents of Halekori C
ಹಳೆಕೋಟಿ ಕಾಲೋನಿ ವಾಸಿಗಳಿಗೆ ಪಟ್ಟಾ,ಪಹಣಿ ನೀಡಲು ರೂಪಾಲಿ ನಾಯ್ಕ ಜಿಲ್ಲಾಧಿಕಾರಿಗೆ ಮನವಿ
ಕಾರವಾರ 16 : ತಾಲೂಕಿನ ಕಡವಾಡ ಹಳೆಕೋಟೆ ಕಾಲೋನಿ ನಿವಾಸಿಗಳಿಗೆ ಪಟ್ಟಾ ವಿತರಿಸಿರುವ ಪ್ಲಾಟ್ಗೆ ಪಹಣಿ ಪತ್ರಿಕೆ ಹಾಗೂ ಪಟ್ಟಾ ವಿತರಿಸದಿರುವ ಪ್ಲಾಟ್ಗಳಿಗೆ ಪಟ್ಟಾ ವಿತರಿಸಿ ಪಹಣಿ ಪತ್ರಿಕೆ ಮಾಡಿಕೊಡುವಂತೆ ಅಲ್ಲಿನ ನಿವಾಸಿಗಳೊಂದಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.ಕಾರವಾರ ತಾಲ್ಲೂಕಿನ ಹಳೆಕೋಟೆ ಕಾಲೋನಿ 1972-73ರಲ್ಲಿ ಪ್ರಾರಂಭಗೊಂಡಿದೆ. ಈ ಕಾಲೋನಿಯಲ್ಲಿ 155 ಪ್ಲಾಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದರಲ್ಲಿ 81 ಪ್ಲಾಟ್ಗಳಿಗೆ ಪಟ್ಟಾ ವಿತರಿಸಲಾಗಿದ್ದರೆ, ಉಳಿದ 74 ಪ್ಲಾಟ್ಗಳಿಗೆ ಇನ್ನು ಪಟ್ಟಾ ವಿತರಿಸಿಲ್ಲ. ಒಟ್ಟು 155 ಪ್ಲಾಟ್ಗಳಲ್ಲಿ ಎಲ್ಲಾ ಸಮುದಾಯದವರು ಮನೆ, ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಇಲ್ಲಿನ ನಿವಾಸಿಗಳು ಸರಕಾರಕ್ಕೆ ಕರ ಭರಣ ಮಾಡಿಕೊಂಡು ಬರುತ್ತಿದ್ದಾರೆ. ಹೀಗಿದ್ದೂ ಕಂದಾಯ ಇಲಾಖೆಯವರಾಗಲಿ, ಅರಣ್ಯ ಇಲಾಖೆಯವರಾಗಲಿ ಇಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿಲ್ಲ. ಬಹಳ ವರ್ಷಗಳ ಈ ಸಮಸ್ಯೆ ಕುರಿತು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿ ದರು.ಆದಷ್ಟು ಬೇಗ ಸ್ಥಳ ಪರೀಶೀಲನೆ ಮಾಡಿ ಇಲ್ಲಿನ ನಿವಾಸಿಗಳಿಗೆ ಪಹಣಿ ಪತ್ರಿಕೆ ಮತ್ತು ಸರಕಾರದಿಂದ ಸಿಗುವ ಮೂಲಭೂತ ಸೌಕರ್ಯ ಒದಗಿಸಿಕೊಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.ಹಣಕೋಣ, ಕಿನ್ನರ, ಚಿತ್ತಾಕುಲ, ಅಮದಳ್ಳಿ ಹಗೂ ಇತರೆ ಗ್ರಾಮ ಪಂಚಾಯತಿಗಳ ಪಹಣಿ ಪತ್ರಿಕೆ ಮಾಡಲು, ಬಾಕಿಯಿರುವ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ಕ್ರಮವಹಿಸುವಂತೆ ಮನವಿ ಮಾಡಿದರು.ಸೀಬರ್ಡ್ ನಿರಾಶ್ರಿತರ ಕಾಲೋನಿಗಳಾದ ಚಿತ್ತಾಕುಲ, ತೋಡುರ, ಮುದಗಾ, ಹಾರವಾಡ, ಬೇಲೆಕೇರಿಯಲ್ಲಿರುವ ನಿರಾಶ್ರಿತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ವಿನಂತಿಸಲಾಯಿತು.ಈ ಸಂದರ್ಭದಲ್ಲಿ ಕಾರವಾರ ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ, ಬಿಜೆಪಿ ಹರೀಶ್ ನಾಗೇಕರ, ಗ್ರಾಮ ಪಂಚಾಯತಿ ಸದಸ್ಯರಾದ ಕಿಶೋರ ಕಡವಾಡಕರ, ರವಿ ಗೌಡ, ಪುಂಡಲಿಕ ಹುಲಸ್ವಾರ, ಚಂದ್ರಕಲಾ ಗೌಡ ಹಾಗೂ ಹಳೆಕೋಟೆ ಕಾಲೋನಿ ನಿವಾಸಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 