ಎಸ್‌ಎಫ್‌ಐ್ಘ ಡಿವೈಎಫ್‌ಐ ವತಿಯಿಂದ ಭಗತ್ಸಿಂಗ್, ರಾಜಗುರು ಮತ್ತು ಸುಖದೇವ ಹುತಾತ್ಮ ದಿನಾಚರಣೆ

SFI, DYFI observes martyrdom day of Bhagat Singh, Rajguru and Sukhdev

ಎಸ್‌ಎಫ್‌ಐ್ಘ ಡಿವೈಎಫ್‌ಐ ವತಿಯಿಂದ ಭಗತ್ಸಿಂಗ್, ರಾಜಗುರು ಮತ್ತು ಸುಖದೇವ ಹುತಾತ್ಮ ದಿನಾಚರಣೆ

.ಹಾವೇರಿ 23 : ವಿದ್ಯಾರ್ಥಿ-ಯುವಜನರ ಸ್ಪೂರ್ತಿ, ಸ್ವಾತಂತ್ರ್ಯ ಹೋರಾಟಗಾರರು ಕ್ರಾಂತಿಕಾರಿ ಕಾಮ್ರೇಡ್ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಹುತಾತ್ಮ ದಿನದ ಸ್ಮರಣೆಯ ಕಾರ್ಯಕ್ರಮವನ್ನು ಹಾವೇರಿಯ ಹೊರವಲಯದಲ್ಲಿರುವ ಬಿಸಿಎಮ್ ಇಲಾಖೆಯ ವೃತ್ತಿಪರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೆಷನ್ (ಡಿವೈಎಫ್‌ಐ) ಸಂಯುಕ್ತಾಶ್ರಯದಲ್ಲಿ ಭಗತ್ಸಿಂಗ್ರವರ ಭಾವಚಿತ್ರಕ್ಕೆ ಪುಷ​‍್ಾರೆ್ಪಣ, ಮೌನಾಚರಣೆ ಗೌರವ ಸಮರೆ​‍್ಣ ಸಲ್ಲಿಸಿದರು.ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ ದೇಶದ ಸ್ವತಂತ್ರ್ಯಕ್ಕಾಗಿ ನಗುತ್ತಲೇ ​‍್ರಾಣಾರೆ್ಪಣಗೈದು ಹುತಾತ್ಮರಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಕನಸುಗಳನ್ನು ನನಸು ಮಾಡಲು ಯುವಜನತೆ ಮುಂದಾಗಬೇಕೆಂದು ಕರೆ ನೀಡಿದರು. ಭಗತ್ ಸಿಂಗ್ ಒಬ್ಬ ಉತ್ತಮ ಅಧ್ಯಯನ ಶೀಲರಾಗಿದ್ದರು ಎಷ್ಟರ ಮಟ್ಟಿಗೆ ಎಂದರೆ ನೇಣು ಕಂಬಕ್ಕೆ ಹೇರುವ ಕೊನೆ ಕ್ಷಣದವರೆಗೂ ಅಧ್ಯಯನ ಮಾಡಿದರು.ಕ್ರಾಂತಿ ಎಂದರೆ ಬಂದೂಕು ಬಾಬ್ ಗಳಿಂದ ಹತ್ಯೆ ಮಾಡುವದಲ್ಲ ಎಂದು ನಂಬಿದ್ದರು. ಭಗತ್ ತಾಯಿಯೊಂದಿಗೆ ಸಂಭಾಷಣೆ ಮಾಡುವ ಸಂದರ್ಭದಲ್ಲಿ ಬಿಳಿಯ ಸಾಹೇಬರ ಬದಲಾಗಿ ಕರಿಯ ಸಾಹೇಬರು ಬರಬಹುದು ಭಗತ್ ಸಿಂಗ್ ಆತಂಕ ಇಂದು ಪ್ರಸ್ತುತವಾಗಿದೆ ಎಂದರು.ಡಿವೈಎಫ್‌ಐ ಮುಖಂಡರಾದ ನಾರಾಯಣ ಕಾಳೆ ಮಾತನಾಡಿ ಭಗತ್ ಸಿಂಗ್ ಅವರನ್ನು ಸರಿಯಾಗಿ ಅಧ್ಯಯನ ಮಾಡಿ ಆದರ್ಶವಾಗಿ ತೆಗೆದುಕೊಂಡು ವಿದ್ಯಾರ್ಥಿ ಯುವಜನರು ಶಿಕ್ಷಣಕ್ಕಾಗಿ, ಉದ್ಯೋಗಕ್ಕಾಗಿ, ದೇಶದ ಸೌಹಾರ್ದ ಐಕ್ಯತೆಗಾಗಿ ಹೋರಾಡಬೇಕು ಎಂದರು.ಭಗತ್ ಸಿಂಗ್ ಸಂಗಡಿಗರೊಂದಿಗೆ ಹಾವೇರಿ ನೆಲದ ಸ್ವತಂತ್ರ್ಯ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮೈಲಾರ ಮಹಾದೇವಪ್ಪ, ತಿರುಕಪ್ಪ ಮಡಿವಾಳರ, ಮೆಣಸಿನಾಳ ತಿಮ್ಮನಗೌಡರು ಇವರನ್ನು ಸ್ಮರಿಸಬೇಕು. ಉದ್ಯೋಗ ಜೀವನಕ್ಕಾಗಿ ಎಷ್ಟು ಮುಖ್ಯ ಅಷ್ಟೇ ದೇಶಕ್ಕಾಗಿ ಕೂಡ ದುಡಿಯಬೇಕು. ನಿರಂತರ ಅಭ್ಯಾಸ ದಿಂದ ಸಾಧನೆ ಮಾಡಿ ಆಗ ಮಾತ್ರ ಹುತಾತ್ಮರ ತ್ಯಾಗ ಸಾರ್ಥಕ ಎಂದರು. ಚುಟುಕು ಸಾಹಿತ್ಯ ವೇದಿಕೆ ಜಿಲ್ಲಾ ಕಾರ್ಯದರ್ಶಿ ಗಂಗಯ್ಯ ಕುಲಕರ್ಣಿ, ನಿಲಯ ಪಾಲಕರಾದ ಪರಮೇಶ್ವರ ತಿಪ್ಪಕೊಂಡರ, ಅಧ್ಯಕ್ಷತೆ ವಹಿಸಿದ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಮಾತನಾಡಿದರು. ವೇದಿಕೆಯಲ್ಲಿ ಸುನೀಲ್ ಕುಮಾರ್ ಎಲ್ ಇದ್ದರು. ನವೀನ ಮಲಗಣ್ಣನವರ, ವೀರನಗೌಡ ಪಾಟೀಲ, ಸಂಜೀವ ಬನ್ನಿಮಟ್ಟಿ, ರಾಕೇಶ ಗುರಣ್ಣನವರ, ಶಿವರಾಜ ಬೇಲಿ, ಅಪ್ಪು  ಆರ್, ಅನ್ವಿಕಾ ಆರ್ ಬಿ, ಭುವನ್, ರತನ್ ಪಿ.ಟಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.