ಎಸ್ಎಸ್ಎಲ್ಸಿ ವಿದ್ಯಾಥರ್ಿಗಳ ಬೀಳ್ಕೋಡುವ ಸಮಾರಂಭ
ಲೋಕದರ್ಶನ ವರದಿ
ಘಟಪ್ರಭಾ 03: ಸಮೀಪದ ದುರದುಂಡಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಸನ್ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾಥರ್ಿಗಳ ಬೀಳ್ಕೋಡುವ ಸಮಾರಂಭ ಹಾಗೂ ವಾಷರ್ಿಕ ಕ್ರೀಡಾ ಕೂಟಗಳ ಬಹುಮಾನ ವಿತರಣಾ ಸಮಾರಂಭವು ಶುಕ್ರವಾರ ಅದ್ದೂರಿಯಾಗಿ ಜರುಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಾರೂಗೇರಿಯ ಸಿದ್ಧೇಶ್ವರ ಕಲಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಸಾಹಿತಿ ಟಿ.ಎಸ್.ವಂಟಗೂಡಿ ಮಾತನಾಡಿ, ಇಂದಿನ ವಿದ್ಯಾಥರ್ಿಗಳೇ ನಾಳಿನ ಗಣ್ಯ ನಾಗರಿಕರು. ವಿದ್ಯಾಥರ್ಿಗಳು ಸಾಧನೆಯ ಶಿಖರ ಮುಟ್ಟಬೇಕಾದರೆ ಶಿಸ್ತು, ಏಕಾಗ್ರತೆ, ಸಮಯ ಪ್ರಜ್ಞೆ, ಸತತ ಪ್ರಯತ್ನಶೀಲರಾಗಬೇಕು. ವಿದ್ಯಾಥರ್ಿಗಳು ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಕಲೆ, ಸಾಹಿತ್ಯ ಸಂಗೀತಗಳಲ್ಲಿ ಕೂಡಾ ಆಸಕ್ತಿ ಹೊಂದಿರಬೇಕೇಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪ್ರಭಾರಿ ಮುಖ್ಯೋಪಾಧ್ಯಾಯ ಎಂ.ಕೆ.ವಡೇರ ವಹಿಸಿದ್ದರು. ವೇದಿಕೆ ಮೇಲೆ ಹಿರಿಯರಾದ ಶಂಕರ ಅಂತರಗಟ್ಟಿ, ತಾ.ಪಂ ಸದಸ್ಯೆ ಸುಮಿತ್ರಾ ಅಂತರಗಟ್ಟಿ, ಗ್ರಾ.ಪಂ ಅಧ್ಯಕ್ಷ ಭೀಮಶಿ ಹುಕ್ಕೇರಿ, ದೈಹಿಕ ಶಿಕ್ಷಕ ಆರ್.ಎಸ್.ಕದಂ, ವಿ.ಬಿ.ಅರಬೆಂಚಿ, ಎಸ್.ಎನ್.ಕುಂದರಗಿ, ಪಿ.ಬಿ.ಬನ್ನೂರ, ಡಾ.ಎಚ್.ಎಸ್.ಗೋರಕನಾಥ, ಗಂಗವ್ವಾ ಅಂತರಗಟ್ಟಿ, ಕಲ್ಲವ್ವಾ ಹಂಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿದ್ಯಾಥರ್ಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ವಾಷರ್ಿಕ ಕ್ರೀಡಾ ಕೂಟದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾಥರ್ಿಗಳಿಗೆ ಗಣ್ಯರಿಂದ ಬಹುಮಾನಗಳನ್ನು ವಿತರಿಸಲಾಯಿತು.
ಶಿಕ್ಷಕಿಯರಾದ ಆರ್.ಎಸ್.ಕದಂ ಸ್ವಾಗತಿಸಿದರು. ಮಹಾದೇವಿ ಹುಕ್ಕೇರಿ ನಿರೂಪಿಸಿದರು. ಜಿ.ಆರ್.ಜೂಗನವರ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 