ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಾಧಕ ರತ್ನ ಪ್ರಶಸ್ತಿ

ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಾಧಕ ರತ್ನ ಪ್ರಶಸ್ತಿ Sadhak Ratna Award for High School Physical Education Teachers


ಜಮಖಂಡಿ 30 : ತಾಲೂಕಾ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸತತವಾಗಿ ರಾಜ್ಯಮಟ್ಟಕ್ಕೆ ಹಾಗೂ ರಾಷ್ಟ್ರಮಟ್ಟಕ್ಕೆ ಫುಟ್ಬಾಲ್ ಕ್ರೀಡೆಯಲ್ಲಿ ಪ್ರೌಢಶಾಲಾ ವಿಭಾಗದ ಮಕ್ಕಳನ್ನು ತರಬೇತಿ ನೀಡಿ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವಂತೆ ತರಬೇತಿಸಿ ಹರಿಯಾಣ ರಾಜ್ಯದ ಪಾಣಿಪತ್ತಿನಲ್ಲಿ ನಡೆದಿರುವ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವಂತೆ ಶ್ರಮಿಸಿದ್ದಕ್ಕೆ ಸರಕಾರಿ ಪಿ,ಬಿ, ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ ಬೋಸ್ಲೆ ವರಿಗೆ ಸಾಧಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.