ಕಂಬಾರಗಟ್ಟಿಯಲ್ಲಿ ನೀರು ಹಾವು ಮತ್ತು ಮೊಟ್ಟೆಗಳ ಸುರಕ್ಷಿತ ರಕ್ಷಣೆ
Safe protection of water snakes and eggs in Kambaragatti
ಮುಂಡಗೋಡ 21 : ತಾಲೂಕಿನ ಕಂಬಾರಗಟ್ಟಿಯಲ್ಲಿ ಶಿವಪ್ಪ ದುರ್ಗಪ್ಪ ಮಾದರ ಅವರ ಮನೆಯ ಪಾಯ ತೆಗೆಯುವಾಗ ದೊಡ್ಡ ಗಾತ್ರದ ನೀರು ಹಾವು ಹಾಗೂ ಸುಮಾರು 35ರಿಂದ 40 ಮೊಟ್ಟೆಗಳು ಪತ್ತೆಯಾಗಿವೆ. ಘಟನೆ ತಿಳಿದು ಅಜ್ಜಪ್ಪ ಉಪವಲಯಾಧಿಕಾರಿಗಳು ಮುಂಡಗೋಡ ಟೌನ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮುತ್ತುರಾಜ ಹಳ್ಳಿ ಗಸ್ತು ಅರಣ್ಯ ಪಾಲಕ ಹಾಗೂ ಉರಗ ರಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಹಾವು ಮತ್ತು ಮೊಟ್ಟೆಗಳನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ರಕ್ಷಿಸಿದರು. ನಂತರ ಹಾವನ್ನು ಅದರ ಸೂಕ್ತ ನೈಸರ್ಗಿಕ ಆವಾಸ ಪ್ರದೇಶಕ್ಕೆ ಬಿಡುಗಡೆ ಮಾಡಲಾಯಿತು. ಕಾರ್ಯಾಚರಣೆಯಲ್ಲಿ ನಾಗರಾಜ್ ಗುಬ್ಬಕ್ಕನವರ್ ಸೇರಿದಂತೆ ಹಾಗೂ ಸಾರ್ವಜನಿಕರು ಸಹಕರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 