ಕಂಬಾರಗಟ್ಟಿಯಲ್ಲಿ ನೀರು ಹಾವು ಮತ್ತು ಮೊಟ್ಟೆಗಳ ಸುರಕ್ಷಿತ ರಕ್ಷಣೆ
Safe protection of water snakes and eggs in Kambaragatti
ಮುಂಡಗೋಡ 21 : ತಾಲೂಕಿನ ಕಂಬಾರಗಟ್ಟಿಯಲ್ಲಿ ಶಿವಪ್ಪ ದುರ್ಗಪ್ಪ ಮಾದರ ಅವರ ಮನೆಯ ಪಾಯ ತೆಗೆಯುವಾಗ ದೊಡ್ಡ ಗಾತ್ರದ ನೀರು ಹಾವು ಹಾಗೂ ಸುಮಾರು 35ರಿಂದ 40 ಮೊಟ್ಟೆಗಳು ಪತ್ತೆಯಾಗಿವೆ. ಘಟನೆ ತಿಳಿದು ಅಜ್ಜಪ್ಪ ಉಪವಲಯಾಧಿಕಾರಿಗಳು ಮುಂಡಗೋಡ ಟೌನ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮುತ್ತುರಾಜ ಹಳ್ಳಿ ಗಸ್ತು ಅರಣ್ಯ ಪಾಲಕ ಹಾಗೂ ಉರಗ ರಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಹಾವು ಮತ್ತು ಮೊಟ್ಟೆಗಳನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ರಕ್ಷಿಸಿದರು. ನಂತರ ಹಾವನ್ನು ಅದರ ಸೂಕ್ತ ನೈಸರ್ಗಿಕ ಆವಾಸ ಪ್ರದೇಶಕ್ಕೆ ಬಿಡುಗಡೆ ಮಾಡಲಾಯಿತು. ಕಾರ್ಯಾಚರಣೆಯಲ್ಲಿ ನಾಗರಾಜ್ ಗುಬ್ಬಕ್ಕನವರ್ ಸೇರಿದಂತೆ ಹಾಗೂ ಸಾರ್ವಜನಿಕರು ಸಹಕರಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 