ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಸಾಹಿತ್ಯ ಗೊಂಡಬಾಳ ಆಯ್ಕೆ
Sahitya Gondabala selected for state-level Balgaurava Award
ಕೊಪ್ಪಳ 12: ಇಲ್ಲಿನ ಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳ ಕರ್ನಾಟಕ ಸರಕಾರದ ಬಾಲವಿಕಾಸ ಅಕಾಡೆಮಿ ಮೂಲಕ ಕೊಡುವ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ.
ಅಕಾಡೆಮಿ ನೀಡಿರುವ ಆಯ್ಕೆ ಪಟ್ಟಿಯಲ್ಲಿ 2023-24 ನೇ ಸಾಲಿನ ಬಹುಮುಖ ಪ್ರತಿಭೆ ವಿಭಾಗದಲ್ಲಿ ಸಮಾಜ ಸೇವಕರಾದ ಮಂಜುನಾಥ ಜಿ. ಗೊಂಡಬಾಳ ಮತ್ತು ಜ್ಯೋತಿ ಎಂ. ಗೊಂಡಬಾಳ ದಂಪತಿಯ ಪುತ್ರಿ ಬಹುಮುಖ ಪ್ರತಿಭೆ ಕು. ಸಾಹಿತ್ಯ ಎಂ. ಗೊಂಡಬಾಳ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಕ್ಕೆ ಕಾಲೇಜಿನ ಸಿಬ್ಬಂದಿ, ಸಂಗೀತ ನೃತ್ಯ ಶಿಕ್ಷಕರು ಸೇರಿ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.
ಸಂಗೀತ, ವೆಸ್ಟರ್ನ್ ನೃತ್ಯ, ಭರತನಾಟ್ಯ ಸೇರಿದಂತೆ ಗಿಟಾರ್ ವಾದನ, ಕೀಬೋರ್ಡ, ಹಾರ್ಮೋನಿಯಂ ನುಡಿಸುವದು, ಮತ್ತು ಮೌಥ್ ಪಿಯಾನೋದಲ್ಲಿ ಪರಿಣತಿ ಹೊಂದಿದ್ದು ಅನೇಕ ಉತ್ಸವ ಮತ್ತು ವೇದಿಕೆಯಲ್ಲಿ ಕಾರ್ಯಕ್ರಮ ನೀಡಿದ್ದಾರೆ.
ಕು. ಸಾಹಿತ್ಯ ಕ್ರೀಡೆಯಲ್ಲೂ ಸಾಧನೆ ಮಾಡಿದ್ದು, ರಾಜ್ಯಮಟ್ಟದ ದಸರಾ ಸಿಎಂ ಕಪ್ ನೆಟ್ಬಾಲ್ ಸೇರಿ ಹಲವು ರಾಜ್ಯಮಟ್ಟದ ಪ್ರಶಸ್ತಿ, ಪೆಂಕಾಕ್ ಸಿಲತ್ನಲ್ಲಿ ರಾಜ್ಯ ಮತ್ತು ರಾಷ್ಟಮಟ್ಟದ ಪದಕ ಸೇರಿ ಜಂಪ್ ರೋಪ್ ಕ್ರೀಡೆ, ಕರಾಟೆ, ಏರ್ರೈಫಲ್ ನಲ್ಲಿ ಪ್ರಶಸ್ತಿ ಪಡೆದಿದ್ದಾಳೆ. ಈಗಾಗಲೇ ಹಲವಾರು ಸಂಘ ಸಂಸ್ಥೆಗಳು ಈಕೆಯ ಸಾಧನೆಗೆ ಪ್ರಶಸ್ತಿ ಪುರಸ್ಕಾರ ನೀಡಿದ್ದಾರೆ.
ಸದರಿ ಪ್ರಶಸ್ತಿಯನ್ನು ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುತ್ತಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 