ಸಂಭಾಜಿ ಭಿಡೆ ಪ್ರವೇಶ ನಿಷೇಧ ಆದೇಶ ಹಿಂಪಡೆಯುವಂತೆ ಒತ್ತಾಯ
ಲೋಕದರ್ಶನ ವರದಿ
ಬೆಳಗಾವಿ : ಮಹಾರಾಷ್ಟ್ರದ ಮುಖಂಡ ಸಂಭಾಜಿ ಭಿಡೆ ಅವರಿಗೆ ಹೇರಿರುವ ರಾಜ್ಯ ಪ್ರವೇಶ ನಿಷೇಧ ಆದೇಶ ಹಿಂಪಡೆಯವಂತೆ ಒತ್ತಾಯಿಸಿ ಶ್ರೀ ಶಿವಪ್ರತಿಷ್ಠಾನ ಹಿಂದೂಸ್ತಾನ್ ಸಂಸ್ಥೆಯ ಬೆಳಗಾವಿಯ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಮುಖಂಡ ಸಂಭಾಜಿ ಭಿಡೆ ಅವರಿಗೆ ಮಹಾರಾಷ್ಟ್ರ ಸಕರ್ಾರ ಕ್ಲೀನ್ ಚೀಟ್ ನೀಡಿದೆ. ಹೀಗಾಗಿ ಆದೇಶ ಹಿಂಪಡೆಯದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಸಂಘಟನೆ ಕಾರ್ಯಕರ್ತರು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಶ್ರೀ ಶಿವಪ್ರತಿಷ್ಠಾನ ಹಿಂದೂಸ್ತಾನ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದ ಸಂಭಾಜಿರಾವ್ ಭಿಡೆ 'ದಿ ಹಿಸ್ಟರಿ ಆಫ್ ರಾಯಘಡ ಸುವರ್ಣ ಸಿಂಹಾಸನ' ವಿಷಯದ ಕುರಿತು ಉಪನ್ಯಾಸ ನೀಡಲಿದ್ದರು.
ಆದರೆ ಪ್ರಚೋಧನಕಾರಿ ಭಾಷಣ ಮಾಡಿ ಜನರ ಭಾವನೆಯನ್ನು ಕೆರಳಿಸುವ ಆರೋಪದ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಜುಲೈ 22ರಿಂದ 11 ದಿನಗಳ ಕಾಲ ಭಿಡೆ ಅವರ ರಾಜ್ಯ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 