ನ್ಯಾಸರ್ಗಿ ಗ್ರಾಮದಲ್ಲಿ ರಾತ್ರೋರಾತ್ರಿ ಶ್ರೀಗಂಧ ಮರ ಕಳ್ಳತನ
Sandalwood tree theft overnight in Nyasargi village
ನ್ಯಾಸರ್ಗಿ ಗ್ರಾಮದಲ್ಲಿ ರಾತ್ರೋರಾತ್ರಿ ಶ್ರೀಗಂಧ ಮರ ಕಳ್ಳತನ
ಮುಂಡಗೋಡ 26: ತಾಲೂಕಿನಲ್ಲಿ ಶ್ರೀಗಂಧ ಮರಗಳ್ಳರು ಹಾವಳಿ ಹೆಚ್ಚಾಗಿದೆ. ನ್ಯಾಸರ್ಗಿ ಗ್ರಾಮದಲ್ಲಿ ಶುಕ್ರವಾರ ರಾತ್ರೋರಾತ್ರಿ ಲಕ್ಷಾಂತರ ಬೆಲೆಬಾಳುವ ಶ್ರೀಗಂಧದ ಮರವನ್ನು ಕಡಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.
ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದ ಪಿ.ಎಸ್.ಸದಾನಂದ ಪಕ್ಕದ ಮನೆಯಹಿಂದೆ ಇದ್ದ ಶ್ರೀಗಂಧದ ಮರವನ್ನು ಶುಕ್ರವಾರ ರಾತ್ರೋರಾತ್ರಿ ಯಂತ್ರದಿಂದ ಕತ್ತರಿಸಿಕೊಂಡು ಹೋಗಿದ್ದಾರೆ. ಆದರೆ ಮಧ್ಯ ಭಾಗದ ಗಂಧದ ತುಂಡು ಮಾತ್ರ ಸಾಗಿಸಲಾಗಿದ್ದು ಟೊಂಗೆಗಳನ್ನು ಸ್ಥಳದಲ್ಲಿಯೇ ಬಿಸಾಡಲಾಗಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿ ಕಾರಿ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮರಗಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ. ತಾಲೂಕಿನಲ್ಲಿ ಪದೇ ಪದೆ ಶ್ರೀಗಂಧ ಮರಕಳ್ಳರ ಹಾವಳಿ ಹೆಚ್ಚಿದ್ದು ಸಾರ್ವಜನಿರಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 