ಆಸನ ಬದಲಾವಣೆ ಶಿವಸೇನೆಗೆ ಮಾಡಿದ ಅವಮಾನ : ಸಂಜಯ್ ರಾವತ್
shiva sena
ನವದೆಹಲಿ 20:ರಾಜ್ಯಸಭೆಯಲ್ಲಿ ತಮ್ಮ ಆಸನ ಬದಲಾವಣೆ ಮಾಡಿರುವುದು ಅವಮಾನಕರ ಮತ್ತು ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯಸಭೆಯಲ್ಲಿ ತಮ್ಮ ಆಸನ ಬದಲಿಸಿರುವುದು ಅವಮಾನವಾಗಿದೆ ಎಂದು ಅವರು ದೂರಿದ್ದಾರೆ. ಮಹಾರಾಷ್ಟ್ರ ಅಧಿಕಾರ ಹಂಚಿಕೆ ವಿಚಾರವಾಗಿ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ನಡುವೆ ಬಿರುಕು ಬಿಟ್ಟ ಕಾರಣ ಆಡಳಿತರೂಢ ಬಿಜೆಪಿ ಸಂಸತ್ತಿನಲ್ಲಿ ಆಸನ ಬದಲಿಸಿದೆ ಎಂದೂ ಶಿವಸೇನೆ ಆರೋಪಿಸಿದೆ .
ರಾಜ್ಯಸಭೆಯಲ್ಲಿ ತಮ್ಮ ಆಸನವನ್ನು ಮೂರನೇ ಸಾಲಿನಿಂದ ಐದನೇ ಸಾಲಿಗೆ ಬದಲಿಸಿರುವುದು ತೀವ್ರ ಅಚ್ಚರಿ,ಆಘಾತ ಉಂಟು ಮಾಡಿದೆ. ಯಾರೋ ಒಬ್ಬರ ಈ ನಿರ್ಧಾರದಿಂದ ಶಿವಸೇನೆಯ ಭಾವನೆಗಳಿಗೆ ಧಕ್ಕೆಯಾಗಿದೆ ಅಪಮಾನವಾಗಿದೆ ಎಂದು ಪ್ರತ್ರದಲ್ಲಿ ಹೇಳಿಕೊಂಡಿದ್ದಾರೆ
ಮೇಲಾಗಿ ನಮ್ಮ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದೂ ಅಸಮಾದಾನ ಹೊರಹಾಕಿದ್ದಾರೆ.
ಉದ್ದೇಶಪೂರ್ವಕವಾಗಿ, ಅವಮಾನ ಮಾಡಬೇಕು ಎಂಬ ಕಾರಣದಿಂದಲೇ ಮೂರನೇ ಸಾಲಿನಿಂದ ಎರಡು ಸಾಲುಗಳ ಹಿಂದಕ್ಕೆ ಹಾಕಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ರಾವತ್ ಸಭಾಪತಿಯವರಿಗೆ ಪತ್ರ ಬರೆದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 