ಭಾವೈಕ್ಯತೆಗೆ ಮೆರಗು ತಂದ ಸಂಕ್ರಾಂತಿ ಮಹಾಪೂಜೆ
ಲೋಕದರ್ಶನ ವರದಿ
ಗುರ್ಲಾಪೂರ 17: ಸಮೀಪದ ಇಟ್ನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಮಾತರ್ಾಂಡ ಮಲ್ಲಯ್ಯ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ನಿಮಿತ್ಯವಾಗಿ ಸಕಲ ಜೀವರಾಶಿಗಳ ಲೋಕ ಕಲ್ಯಾಣಕ್ಕಾಗಿ ಮಾತರ್ಾಂಡ ಮಲ್ಲಯ್ಯ ಆರಾಧಕ ಸಿದ್ಧೇಶ್ವರ ಶರಣರ ಸಾನಿಧ್ಯದಲ್ಲಿ ಹೋಮ ಹವನದ ಮಹಾಪೂಜೆ ನೇರವೆರಸಲಾಯಿತು. ದಿನವಿಡಿ ಭಜನೆ ಚೌಡಕಿ ಪದ ಇನ್ನೂ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಾವಿರಾರು ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹೋಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಸಿದ್ಧೇಶ್ವರ ಶರಣರು ಮಾತನಡಿ, ಮಾನವ ಕುಲವೆಲ್ಲ ಒಂದೇ. ಎಲ್ಲ ಧರ್ಮಗಳ ಸಂದೇಶಗಳು ಶಾಂತಿಯ ಮಂತ್ರಗಳು ಒಂದೆ ರೂಪದಾಗಿವೆ. ಭಾವೈಕ್ಯತೆ ಸಾಮರಸ್ಯ ಪರಸ್ಪರ ಸಹಕಾರದ ಜೀವನವೇ ಮನುಷ್ಯನ ಮೂಲ ತತ್ವವಾಗಿದೆ. ಇನ್ನೂಬ್ಬರಿಗೆ ಭಾವನೆಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ಸಹಬಾಳ್ವೆಯಿಂದ ಬದುಕಿದಾಗ ಬದುಕಿಗೊಂದು ಅರ್ಥ ಬರುವದರ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ಸಾಧ್ಯವಾಗುದು ಎಂದು ನುಡಿದರು.
ಮಧ್ಯಾಹ್ನ ಎಲ್ಲ ಭಕ್ತಾಧಿಗಳಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯ ಸವಸುದ್ದಿ, ಖನದಾಳ, ಮುಗಳಖೋಡ, ಗುಲರ್ಾಪೂರ, ಕಂಕಣವಾಡಿ, ಮೂಡಲಗಿ, ಹಿಡಕಲ್ ಹಾಗೂ ವಿವಿಧ ಗ್ರಾಮಗಳ ಭಕ್ತರು ಪಾಲ್ಗೊಂಡು ಪುಣಿತರಾದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 