ಸಂತ ಸೇವಾಲಾಲ್ ಜಯಂತಿ: ಪೂರ್ವಭಾವಿ ಸಭೆ
Sant Sevalal Jayanti: Preparatory meeting
ಶಿರಹಟ್ಟಿ 06: ತಾಲೂಕು ಆಡಳಿತದ ವತಿಯಿಂದ ತಹಸೀಲ್ದಾರ್ಕಾರ್ಯಾಲಯದ ಸಭಾಂಗಣದಲ್ಲಿ ಆಚರಿಸುವ ಪ್ರತಿಯೊಬ್ಬ ಮಹನೀಯರ ಜಯಂತಿ ಆಚರಣೆಗೆ ಎಲ್ಲ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಬೇಕು. ಯಾವ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಾರೊ ಅವರಿಗೆ ನೋಟಿಸ್ ನೀಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಖಡಕ್ ಸೂಚಿಸಿದರು.
28 ಇಲಾಖೆ ಅಧಿಕಾರಿಗಳ ಪೈಕಿ ಬೆರಳೆಣಿಕೆ ಅಧಿಕಾರಿಗಳು ಬೆರಳೆಣಿಕೆಯಷ್ಟು ಅಧಿಕಾರಿಗಳು ಮಾತ್ರ ಸಂತ ಸೇವಾಲಾಲ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದು, ಅಬಕಾರಿ, ಸಾರಿಗೆ ಇಲಾಖೆ, ಹೆಸ್ಕಾಂ, ರೇಷ್ಮೆ, ನಿರ್ಮಿತಿ ಕೇಂದ್ರ, ಭೂಸೇನಾ ನಿಗಮದ ಅಧಿಕಾರಿಗಳು ಸಭೆಗೆ ಬಂದಿಲ್ಲ. ಇವರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ತಾಕೀತು ಮಾಡಿದರು.
ಜಾತ್ಯತೀತ ಮತ್ತು ಪಕ್ಷಾತೀತವಾಗಿ ಮಹನೀಯರ ಜಯಂತಿ ಆಚರಣೆ ಮಾಡಿದಾಗ ಮಾತ್ರ ಸಾರ್ಥಕವಾಗುತ್ತದೆ. ಅಬಕಾರಿ ಇಲಾಖೆ, ನಿರ್ಮಿತಿ ಕೇಂದ್ರ, ಭೂಸೇನಾ ನಿಗಮದ ಅಧಿಕಾರಿಗಳು ಯಾವೊಂದು ಜಯಂತಿಯ ಪೂರ್ವಭಾವಿ ಸಭೆಗೂ ಬರುವುದಿಲ್ಲ. ಇವರ ಬಗ್ಗೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ವತಿಯಿಂದ ಆಚರಿಸಲಾಗುವ ಮಹನೀಯರ ಜಯಂತಿಗಳ ಬಗ್ಗೆ ಸಾರ್ವಜನಿಕರಲ್ಲಿ ವಿರೋಧ ಹಾಗೂ ಚರ್ಚೆಗಳು ನಡೆಯುತ್ತಿವೆ. ಎಲ್ಲ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಕ್ರಮ ವಹಿಸಬೇಕು ಎಂದರು.
ತಾಲೂಕು ಆಡಳಿತದ ವತಿಯಿಂದ ಸಂತ ಸೇವಾಲಾಲ್ ಜಯಂತ್ಯುತ್ಸವ ಕಾರ್ಯಕ್ರಮ ಫೆ. 15ರಂದು ಬೆಳಗ್ಗೆ 11 ಗಂಟೆಗೆ ತಹಸೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಎಲ್ಲ ಸರ್ಕಾರಿ ಕಚೇರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜಗಳಲ್ಲಿ, ಗ್ರಾಮ ಪಂಚಾಯಿತಿ, ಬ್ಯಾಂಕ್ಗಳಲ್ಲಿಯೂ ಶ್ರದ್ಧಾ ಭಕ್ತಿಯೊಂದಿಗೆ ಶರಣರ, ಸಂತರ, ದಾರ್ಶನಿಕರ, ಮಹನಿಯರ ಜಯಂತಿಗಳು ಕೇವಲ ಅವರವರ ಜಾತಿಗಳಿಗೆ ಮಾತ್ರ ಸೀಮಿತವಾಗುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ಎಲ್ಲರೂ ಒಗ್ಗೂಡಿ ಆಚರಣೆ ಮಾಡಬೇಕು ಎಂದರು.
ತಹಸೀಲ್ದಾರ್ಕೆ. ರಾಘವೇಂದ್ರ ರಾವ್, ತಾಪಂ ಇಒ ರಾಮಣ್ಣ ದೊಡ್ಡಮನಿ, ಸಮಾಜ ಕಲ್ಯಾಣ ಇಲಾಖೆಯ ಗೋಪಾಲ ಲಮಾಣಿ, ಮುಖಂಡ ಜಾನು ಲಮಾಣಿ, ಈರಣ್ಣ ಚವ್ಹಾಣ, ನಾಗರಾಜ ಲಕ್ಕುಂಡಿ, ಶಂಕರ ಮರಾಠಿ, ರಾಜು ಶಿರಹಟ್ಟಿ, ತಿಪ್ಪಣ್ಣಲಮಾಣಿ, ಶಿವನಗೌಡ ಪಾಟೀಲ, ಬಸವರಾಜ ಪೂಜಾರ, ಖಜಾನೆ ಇಲಾಖೆ ಅಧಿಕಾರಿ ಶಿವಪ್ಪ ಹದ್ದಿ, ಎಂ.ಎಸ್. ಸಂಕನೂರ, ಮರಿಗೌಡ ಸುರಕೋಡ, ರಾಮಪ್ಪ ಪೂಜಾರ, ಶಿವಕುಮಾರ ಕಾಶಪ್ಪನವರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 