ಪ್ರಜಾಸೌಧ ನಿರ್ಮಾಣ ಜಾಗಕ್ಕೆ ಸತೀಶ ಜಾರಕಿಹೊಳಿ ಭೇಟಿ
Satish Jarakiholi visits the Prajasoudha construction site
ಪ್ರಜಾಸೌಧ ನಿರ್ಮಾಣ ಜಾಗಕ್ಕೆ ಸತೀಶ ಜಾರಕಿಹೊಳಿ ಭೇಟಿ
ಕಾಗವಾಡ,18: ಪಟ್ಟಣದಲ್ಲಿ ನಿರ್ಮಾಣ ಆಗುತ್ತಿರುವ ಪ್ರಜಾಸೌಧ ನಿರ್ಮಾಣ ಜಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಶುಕ್ರವಾರ ದಿ.17ರಂದು ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣದ ನಿಯೋಜಿತ ಸ್ಥಳ ಪರೀಶೀಲನೆ ಮಾಡಿದ ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾರ್ಗದರ್ಶನ ನೀಡಿ ಮಾತನಾಡಿದ ಅವರು ಕಾಗವಾಡ ನೂತನ ತಾಲ್ಲೂಕು ಆಗಿ ಅನೇಕ ವರ್ಷಗಳು ಕಳೆದಿದ್ದರು ತಾಲ್ಲೂಕು ಆಡಳಿತ ಕಚೇರಿಗೆ ಸ್ವಂತ ಕಚೇರಿ ಇಲ್ಲಾ ಈ ಕುರಿತು ಶಾಸಕ ರಾಜು ಕಾಗೆಯವರ ವಿಶೇಷ ಪಯತ್ನದಿಂದ ಸರಕಾರದಿಂದ 8.60 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಆದಷ್ಟು ಬೇಗ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.
ಈ ವೇಳೆ ಶಾಸಕ ರಾಜು ಕಾಗೆ, ಮಾಜಿ ಸಚಿವ ವೀರಕುಮಾರ ಪಾಟೀಲ, ಮೋಹನ ಶಾ, ಗಜಾನನ ಮಂಗಸೂಳಿ, ಡಾ.ಎನ್ ಎ ಮಗದುಮ್ಮ, ಅಧಿಕಾರಿಗಳಾದ ತಹಶಿಲ್ದಾರ ರಾಜೇಶ ಬುರ್ಲಿ, ವೀರಣ್ಣ ವಾಲಿ, ಎಂ ಆರ್ ಮುಂಜೆ, ಸಂಜುಕುಮಾರ ಸದಲಗೆ, ಜಯಾನಂದ ಹಿರೇಮಠ, ರಮೇಶ ಚೌಗಲಾ, ಜ್ಯೋತಿಕುಮಾರ ಪಾಟೀಲ, ಸೌರಭ ಪಾಟೀಲ, ಸೇರಿದಂತೆ ಅನೇಕರು ಇದ್ದರು.
ಫೋಟೋ ಶೀರ್ಷಿಕೆ: ಕಾಗವಾಡ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ನಿಯೋಜಿತ ಜಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಪರೀಶೀಲನೆ ನಡೆಸಿದರು ಶಾಸಕ ರಾಜು ಕಾಗೆ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 