ಪ್ರಜಾಸೌಧ ನಿರ್ಮಾಣ ಜಾಗಕ್ಕೆ ಸತೀಶ ಜಾರಕಿಹೊಳಿ ಭೇಟಿ
Satish Jarakiholi visits the Prajasoudha construction site
ಪ್ರಜಾಸೌಧ ನಿರ್ಮಾಣ ಜಾಗಕ್ಕೆ ಸತೀಶ ಜಾರಕಿಹೊಳಿ ಭೇಟಿ
ಕಾಗವಾಡ,18: ಪಟ್ಟಣದಲ್ಲಿ ನಿರ್ಮಾಣ ಆಗುತ್ತಿರುವ ಪ್ರಜಾಸೌಧ ನಿರ್ಮಾಣ ಜಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಶುಕ್ರವಾರ ದಿ.17ರಂದು ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣದ ನಿಯೋಜಿತ ಸ್ಥಳ ಪರೀಶೀಲನೆ ಮಾಡಿದ ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾರ್ಗದರ್ಶನ ನೀಡಿ ಮಾತನಾಡಿದ ಅವರು ಕಾಗವಾಡ ನೂತನ ತಾಲ್ಲೂಕು ಆಗಿ ಅನೇಕ ವರ್ಷಗಳು ಕಳೆದಿದ್ದರು ತಾಲ್ಲೂಕು ಆಡಳಿತ ಕಚೇರಿಗೆ ಸ್ವಂತ ಕಚೇರಿ ಇಲ್ಲಾ ಈ ಕುರಿತು ಶಾಸಕ ರಾಜು ಕಾಗೆಯವರ ವಿಶೇಷ ಪಯತ್ನದಿಂದ ಸರಕಾರದಿಂದ 8.60 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಆದಷ್ಟು ಬೇಗ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.
ಈ ವೇಳೆ ಶಾಸಕ ರಾಜು ಕಾಗೆ, ಮಾಜಿ ಸಚಿವ ವೀರಕುಮಾರ ಪಾಟೀಲ, ಮೋಹನ ಶಾ, ಗಜಾನನ ಮಂಗಸೂಳಿ, ಡಾ.ಎನ್ ಎ ಮಗದುಮ್ಮ, ಅಧಿಕಾರಿಗಳಾದ ತಹಶಿಲ್ದಾರ ರಾಜೇಶ ಬುರ್ಲಿ, ವೀರಣ್ಣ ವಾಲಿ, ಎಂ ಆರ್ ಮುಂಜೆ, ಸಂಜುಕುಮಾರ ಸದಲಗೆ, ಜಯಾನಂದ ಹಿರೇಮಠ, ರಮೇಶ ಚೌಗಲಾ, ಜ್ಯೋತಿಕುಮಾರ ಪಾಟೀಲ, ಸೌರಭ ಪಾಟೀಲ, ಸೇರಿದಂತೆ ಅನೇಕರು ಇದ್ದರು.
ಫೋಟೋ ಶೀರ್ಷಿಕೆ: ಕಾಗವಾಡ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ನಿಯೋಜಿತ ಜಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಪರೀಶೀಲನೆ ನಡೆಸಿದರು ಶಾಸಕ ರಾಜು ಕಾಗೆ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 