ಕರಾವಳಿ ಉತ್ಸವದಲ್ಲಿ ಹೆಲಿಕ್ಯಾಪ್ಟರ್ ಜಾಲಿ ರೈಡ್ಗೆ ಸತೀಶ್ ಕೆ. ಸೈಲ್ ಚಾಲನೆ
Satish K. Sail drives the helicopter jolly ride at the Coastal Festival
ಕಾರವಾರ. ಡಿ.24 : ಕರಾವಳಿ ಉತ್ಸವದ-2025 ರ ಅಂಗವಾಗಿ ಹೆಲಿಕ್ಯಾಪ್ಟರ್ ಜಾಲಿ ರೈಡ್ಗೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ಕರ್ನಾಟಕ ಮಾರ್ಕೇಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹೇಲಿಕ್ಯಾಪ್ಟರ್ ಜಾಲಿ ರೈಡ್ ನಡೆಸಲು ತಹಶೀಲ್ದಾರ, ಲೋಕೋಪಯೋಗಿ ಇಲಾಖೆ, ನಗರಸಭೆ, ಅರಣ್ಯ ಇಲಾಖೆ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಮತ್ತು ಇವೆಂಟ್ ಮ್ಯಾನೇಜ್ ಮೆಂಟ್ ಅವರ ಸಹಕಾರ ಅಪಾರವಾಗಿದೆ ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರತಿ ಟಿಕೆಟ್ಗೆ ರೂ 3,900 ನಿಗಧಿಪಡಿಸಲಾಗಿದೆ. ಇಂದು ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಅವರು ಅಧ್ಯಕ್ಷತೆಯಲ್ಲಿ ವಿಶೇಷವಾಗಿ ಆಶಾ ನಿಕೇತನ ವಿಶೇಷಢ ಶಾಲೆಯ ವಿದ್ಯಾರ್ಥಿಗಳಿಗೆ ಹೆಲಿಕ್ಯಾಪ್ಟರ್ ರೈಡ್ ಮಾಡುವ ಮೂಲಕ ಚಾಲನೆ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ಹೇಲಿಕ್ಯಾಪ್ಟರ್ ರೈಡ್ ಬೆಳ್ಳಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾರಡಲಿದ್ದು, ಹೇಲಿಕ್ಯಾಪ್ಟರ್ ಕಾರವಾರ ಪ್ರದೇಶವನ್ನು 7 ನಿಮಿಷದಲ್ಲಿ ಸುತ್ತು ಹಾಕಲಾಗುವುದು ಎಂದರು.
ಹೆಲಿಕ್ಯಾಪ್ಟರ್ನ ಮೊದಲ ಜಾಲಿ ರೈಡ್ ಆಗಿ, ಆಶಾನಿಕೇತನ ವಿಶೇಷಢ ಶಾಲೆಯ ವಿದ್ಯಾರ್ಥಿಗಳ ಹಾರಾಟ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದೀಲೀಶ್ ಶಶಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಮಂಗಳ ಗೌರಿ ಭಟ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 