ಸವಣೂರ ದುರಂತ ಶಾಸಕ ಪಠಾಣ ಸಂತಾಪ
Savanur tragedy MLA Pathan condoles
ಸವಣೂರ ದುರಂತ ಶಾಸಕ ಪಠಾಣ ಸಂತಾಪ
ಶಿಗ್ಗಾವಿ 23: ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿ ಮತ್ತು ನಮಗೆ ಸಂಪೂರ್ಣ ಸಹಕಾರ ನೀಡಿದ ಯಲ್ಲಾಪೂರ ಶಾಸಕ ಶಿವರಾಂ ಹೆಬ್ಬಾರ್,ಉ.ಕ.ಜಿಲ್ಲಾಡಳಿತ ಪೋಲಿಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ಶಾಸಕ ಯಾಸೀರಖಾನ ಪಠಾಣ ತಿಳಿಸಿದರು. ಸವಣೂರಿನಿಂದ ಕುಮಟಾ ಮಾರುಕಟ್ಟೆಗೆ ವ್ಯಾಪಾರಕ್ಕೆಂದು ತರಕಾರಿ, ಹಣ್ಣು ಹಾಗೂ ದಿನಸಿ ಸಾಮಗ್ರಿಗಳನ್ನು ಹೊತ್ತೊಯ್ದ ಲಾರಿ ಯಲ್ಲಾಪೂರ ತಾಲೂಕಿನ ಗುಳ್ಳಾಪೂರ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸವಣೂರಿನ 29 ಜನ ಲಾರಿ ಅಡಿಯಲ್ಲಿ ಸಿಲುಕಿ ಹತ್ತು ಜನ ಪ್ರಾಣ ತೆತ್ತಿದ್ದಾರೆ ಇನ್ನೂಳಿದ 19 ಜನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತ್ವರಿತವಾಗಿ ವಿಪತ್ತು ನಿರ್ವಹಣಾ ಅಡಿಯಲ್ಲಿ ಚೆಕ್ ಮೂಲಕ ಬಿಡುಗಡೆಗೊಳಿಸಿ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸರ್ಕಾರ ಸಂಪೂರ್ಣ ವೆಚ್ಚ ಭರಿಸಲು ಸಿದ್ದವಾಗಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 