ಉಳವೇಶಪ್ಪ ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ

ಉಳವೇಶಪ್ಪ ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ

ಹಾವೇರಿ29: ಬಾಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲದಯಲ್ಲಿ ಇತ್ತೀಚೆಗೆ (ಡಿ.23 ರಂದು) ಜರುಗಿದ ತೋಟಗಾರಿಕಾ ಮೇಳದಲ್ಲಿ  ಜಿಲ್ಲೆಯ ಹಾನಗಲ್ ತಾಲೂಕಿನ ಮೂಡೂರ ಗ್ರಾಮದ  ಉಳವೇಶಪ್ಪ ಸಿದ್ದಪ್ಪ ತಿಪ್ಪಗೊಂಡ್ರ ಅವರಿಗೆ ಹಾವೇರಿ ಜಿಲ್ಲೆಯ ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ ಮಾಡಲಾಗಿದೆ.        ಪ್ರಶಸ್ತಿಯು ಐದು ಸಾವಿರ ನಗದು ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದೆ ಎಂದು ದೇವಿಹೊಸೂರು ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ.