ರಂಗಭೂಮಿ ಕಲೆ ಉಳಿಸಿ ಬೆಳೆಸಿ : ಕೆ.ಎಂ. ಸೈಯದ್
Save and nurture the art of theatre: K.M. Syed
ರಂಗಭೂಮಿ ಕಲೆ ಉಳಿಸಿ ಬೆಳೆಸಿ : ಕೆ.ಎಂ. ಸೈಯದ್
ಕೊಪ್ಪಳ 02 : ಪ್ರತಿಯೊಬ್ಬರೂ ರಂಗಭೂಮಿ ಕಲೆಯನ್ನು ಉಳಿಸಿ, ಬೆಳೆಸಬೇಕು ಎಂದು ಕೆಪಿಸಿಸಿ ಸಂಯೋಜಕ ಹಾಗೂ ಉದ್ಯಮಿ ಕೆ.ಎಂ.ಸೈಯದ್ ಹೇಳಿದರು. ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಕಾರ್ತಿಕೋತ್ಸವ ನಿಮಿತ್ತ ಶ್ರೀರಾಮಲಿಂಗೇಶ್ವರ ಸೇವಾ ನಾಟ್ಯ ಸಂಘದಿಂದ ಹಮ್ಮಿಕೊಂಡಿದ್ದ ಹುತ್ತದಲ್ಲಿ ಕೈಯಿಟ್ಟ ಮುತ್ತೈದೆ’ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ನಾಟಕಗಳು ಸಾಮಾಜಿಕವಾಗಿ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತೀವೆ. ಟಿವಿ, ಮೊಬೈಲ್ ಹಾವಳಿಯಿಂದ ರಂಗಭೂಮಿ ಅಳಿವಿನಂಚಿನಲ್ಲಿದೆ. ಜನರು ರಂಗಭೂಮಿ ಕಲೆಯನ್ನು ಉಳಿಸಿ, ಬೆಳೆಸಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಕೆ.ಸೋಮಶೇಖರ್ ಹಿಟ್ನಾಳ್, ಕೊಪ್ಪಳ ನಗರದ ಖ್ಯಾತ ವೈದ್ಯರಾದ ಡಾ.ಮಹೇಶ್ ಗೋವನ್ ಕೊಪ್ಪ, ಅಗಳಕೇರಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆಂಚಪ್ಪ ಹಿಟ್ನಾಳ್ ಉಪಾಧ್ಯಕ್ಷ ವಲಿಸಾಬ್ ಪೊಲೀಸ್ ಪಾಟೀಲ್, ಅಗಳಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕನಕ ರಾಜ್ ಬುಳ್ಳಾಪುರ, ಗ್ರಾಮ ಪಂಚಾಯಿತಿಯ ಸದಸ್ಯರು, ಗ್ರಾಮದ ಹಿರಿಯರಾದ ಹುಲಗಪ್ಪ ಗಡಾದ್, ಬಸವರಾಜ್ ಕರ್ಕಿಹಳ್ಳಿ, ಪರಸಪ್ಪ ಗಮಣಿ, ಕೃಷ್ಣ ಗಡಾದ್, ಮಂಜುನಾಥ್ ಶೆಟ್ಟರ್, ಖಾಜಾ ಯಾದಗಿರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 