ಸಾವಿತ್ರಿ ಬಾಯಿ ಫುಲೆ ಶ್ರಮ ಅನನ್ಯ : ಸುನಂದಾ
Savitri Bai Phule Shrama Ananya : Sunanda
ಸಾವಿತ್ರಿ ಬಾಯಿ ಫುಲೆ ಶ್ರಮ ಅನನ್ಯ : ಸುನಂದಾ
ವಿಜಯಪುರ 03: ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 30 ವಿವೇಕನಗರ ಶಾಲೆಯಲ್ಲಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತ್ತು. ಕೆಲ ವರ್ಗಗಳಿಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣವನ್ನು ಸರ್ವರಿಗೂ ಸಿಗುವಂತೆ ಮಾಡಿದ ಕೀರ್ತಿ ಸಾವಿತ್ರಿ ಬಾಯಿ ಫುಲೆ ಅವರಿಗೆ ಸಲ್ಲುತ್ತದೆ. ಜೀವನದಲ್ಲಿ ಬರುವ ಎಡರು ತೊಡರುಗಳನ್ನು ಎದುರಿಸಿ ಸಾಧನೆಯ ಶಿಖರವನ್ನೇರಿದವರು ಶ್ರೀಮತಿ ಸಾವಿತ್ರಿಬಾಯಿ ಪುಲೆ ಹಾಗೂ ಜೋತಿಬಾ ಪುಲೆ ದಂಪತಿಗಳು ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 30 ವಿವೇಕನಗರ ಶಾಲೆಯಲ್ಲಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮುಖ್ಯ ಶಿಕ್ಷಕಿ ಕೆ. ಸುನಂದಾ ಮಾತನಾಡಿದರು. ಶಿಕ್ಷಣದಿಂದ ಮಕ್ಕಳು ತಮ್ಮ ಬದುಕನ್ನು ಉಜ್ವಲ ಗೊಳಿಸಿಕಳ್ಳಬೇಕು ಎಂದು ಕರೆಕೊಟ್ಟರು. ಮಕ್ಕಳು ಸಾವಿತ್ರಿ ಬಾಯಿಯವರಂತೆ ವೇಶ ತೊಟ್ಟು ಆನಂದಿಸಿದರು. ಗುರುಗಳಾದ ಟಿ ಸಿ ನಾಟಿಕಾರ, ಆಯ್ ವ್ಹಿ ಚವ್ಹಾಣ, ಹಾಗೂ ಮಕ್ಕಳು ಮಾತನಾಡಿದರು ಪಾಲಕರು ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 