ಸೀರತ್ ಅಭಿಯಾನ: ರೋಗಿಗಳಿಗೆ ಹಣ್ಣು ಹಂಪಲ ವಿತರಣೆ
Seerat Abhiyan: Distribution of fruits and vegetables to patients
ಸೀರತ್ ಅಭಿಯಾನ: ರೋಗಿಗಳಿಗೆ ಹಣ್ಣು ಹಂಪಲ ವಿತರಣೆ
ತಾಳಿಕೋಟಿ: ಜಮಾತೆ ಇಸ್ಲಾಮಿ ಹಿಂದ್ ರಾಜ್ಯ ಘಟಕದ ವತಿಯಿಂದ ಪ್ರವಾದಿ ಮಹಮ್ಮದರ ಜನ್ಮದಿನಾಚರಣೆ ಅಂಗವಾಗಿ ಸೆ.3ರಿಂದ14ರವರೆಗೆ ಹಮ್ಮಿಕೊಂಡಿರುವ ಸೀರತ್ ಅಭಿಯಾನದ ನಿಮಿತ್ಯವಾಗಿ ಜಮಾತ್ ನ ಸ್ಥಳೀಯ ಮಹಿಳಾ ಘಟಕದ ವತಿಯಿಂದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಗುರುವಾರ ಹಣ್ಣು ಹಂಪಲ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜ.ಇ.ಹಿಂ.ಮಹಿಳಾ ಘಟಕದ ಸಹ ಸಂಚಾಲಕಿ ಕೌಸರ ಎಂ.ಮೇತ್ರಿ ಅವರು ಮಾತನಾಡಿ ಪ್ರವಾದಿ ಮಹಮ್ಮದ್(ಸ)ರು ಮಾನವೀಯ ಮೌಲ್ಯಗಳಿಗೆ ಅತಿಹೆಚ್ಚಿನ ಮಹತ್ವವನ್ನು ಕೊಟ್ಟಿದ್ದಾರೆ ಸಮಾಜ ಸೇವೆ ಅವರ ಜೀವನದ ಅವಿಭಾಜ್ಯ ಅಂಗವಾಗಿತ್ತು. ಸಮಾಜದಲ್ಲಿರುವ ದುರ್ಬಲ, ಅಸಹಾಯಕ ಹಾಗೂ ನಿರ್ಗತಿಕರ ಸೇವೆ ದೇವನ ಆರಾಧನೆಗೆ ಸಮಾನವಾಗಿದೆ ಎಂದು ಅವರು ತಿಳಿಸಿದ್ದಾರೆ ಆದ್ದರಿಂದ ನಾವು ಈ ಅಭಿಯಾನದಲ್ಲಿ ಅವರ ಬದುಕಿನ ಸಂದೇಶವನ್ನು ಸಮಾಜದ ಎಲ್ಲ ವರ್ಗದವರಿಗೂ ತಲುಪಿಸುವುದರ ಜೊತೆಗೆ ಇಂಥಹ ಹಲವಾರು ಸಮಾಜಸೇವಾ ಕಾರ್ಯಗಳನ್ನೂ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ಈ ಸಮಯದಲ್ಲಿ ಪ್ರಸೂತಿ ತಜ್ಞೆ ಡಾ.ಮಧುಬಾಲಾ ಸಿಂಘಾಲ,ಜಿಲ್ಲಾ ಸಂಚಾಲಕಿ ಅಂಜುಮ ಎಕೀನ, ಮಹಿಳಾ ಘಟಕದ ನಗರ ಸಂಚಾಲಕಿ ಖುರ್ಷಿದ್ ಮೊಮೀನ,ಸಾಬೇರಾ ನಮಾಜ ಕಟ್ಟಿ,ಸಹೀಫಾ ನಮಾಜಕಟ್ಟಿ,ನೂರಜಹಾಂ ಕೊರ್ತಿ, ನುಸ್ರತ್ ಸಾಸಬಾಳ,ಮುನೀರಾ ಸಿಪಾಯಿ ಹಾಗೂ ಕಾರ್ಯಕರ್ತೆಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 