ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Selected for the state level in the athletics competition

             ಹಾರೂಗೇರಿ 18: ಅಧ್ಯಯನವೊಂದೇ ವಿದ್ಯಾರ್ಥಿಗಳ ಧ್ಯೇಯವಾಗಬಾರದು. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಬಿ.ಕರ್ಣವಾಡಿ ಹೇಳಿದರು. 

               ಪಟ್ಟಣದ ಜನತಾ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿದ ಅವರು ಕಲಿಕೆಯೊಂದಿಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳು ಸರ್ವಾಂಗೀಣ ವಿಕಾಸ ಹೊಂದುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವಿದೆ ಎಂದರು. 

             ಇತ್ತೀಚೆಗೆ ನಡೆದ ಸನ್ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಭಗವಾನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಸನ್‌ಕುಮಾರ ಬಂಡಗಾರ ಗುಂಡು ಮತ್ತು ಬಲ್ಲೆ ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಮನೋಜ ಕೊಕಟನೂರ ಗುಂಡು ಎಸೆತದಲ್ಲಿ ದ್ವಿತೀಯಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು.