ವಿಶ್ವವಿದ್ಯಾಲಯ ಮಟ್ಟದ ಖೋ-ಖೋ ತಂಡಕ್ಕೆ ಆಯ್ಕೆ
Selected for the university level Kho-Kho team
ತಾಳಿಕೋಟೆ 03: ಪಟ್ಟಣದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಎಸ್.ಎಸ್.ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಎಚ್.ಎಸ್.ಪಾಟೀಲ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ವೀರೇಶ ಲೋಟಗೇರಿ ,ಉಮಾಕಾಂತ ಚವ್ಹಾಣ, ಧರ್ಮಣ್ಣ ಉಂಡಿ ಹಾಗೂ ಮೌಲಾಲಿ ಅತ್ತಾರ ಫೇ.25 ರಂದು ಎಂ.ಈ.ಎಸ್. ಕಲಾ ವಾಣಿಜ್ಯ ಹಾಗೂ ಬಿ.ಸಿ.ಎ ಪದವಿ ಮಹಾವಿದ್ಯಾಲಯ ಮೂಡಲಗಿಯಲ್ಲಿ ನಡೆದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ 2025-26 ನೇ ಸಾಲಿನ ಖೋ - ಖೋ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಈ ನಾಲ್ಕು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಕ್ಕಾಗಿ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಕಾರ್ಯದರ್ಶಿ ಸಚಿನ್.ಎಚ್.ಪಾಟೀಲ ,ಆಡಳಿತಾಧಿಕಾರಿ ಕಿರಣ್.ಎಚ್.ಪಾಟೀಲ, ಹಾಗೂ ಪ್ರಾಚಾರ್ಯರಾದ ಶಿವಕುಮಾರ ನಾಯಕ, ಉಪನ್ಯಾಸಕನಎಂ ಎಸ್ ರಾಯಗೊಂಡ, ಶರಣು ಬಿರಾದಾರ, ಸಾಬಣ್ಣ ಮೇಟಿ, ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 