ಕೆ ವೀರಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
Selection of office bearers for K Veerapur Primary Agricultural Co-operative Society
ಕೆ ವೀರಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಬಳ್ಳಾರಿ 19 : ರಂದು ತಾಲೂಕಿನ ಕೆ ವೀರಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಚುನಾವಣೆಯನ್ನು ನಡೆಸಲಾಯಿತು ಎಂದು ಚುನಾವಣಾ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘದ ಅಧ್ಯಕ್ಷರಾಗಿ ಡಿ ಬೋಗಾ ರೆಡ್ಡಿ, ಅಧ್ಯಕ್ಷರಾಗಿ ಡಿ ವಿರುಪಾಕ್ಷಗೌಡ ಮತ್ತು ನಿರ್ದೇಶಕರಾಗಿ, ಕೆ ವೀರರೆಡ್ಡಿ ಎಸ್ ವಿರಯ್ಯ ವೈ ಯುರಣ್ಣ, ಎಚ್ ಇಂದು ಶೇಖರ್ ಗೌಡ, ಎಂ ತಿಪ್ಪಮ್ಮ, ವೈಸುಭದ್ರಮ್ಮ, ಜಿಎಂ ಲಕ್ಷ್ಮಿ, ಪಿ ಮಾಬುಸಾಬ್, ಟಿ ವೆಂಕಟರಮಣ, ಬಿ ಈರಣ್ಣ ಸೇರಿದಂತೆ 12 ಜನ ನಿರ್ದೇಶಕರು ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಪ್ರಾಣೇಶ್ ಮತ್ತು ಸಂಘದ ಸಿ ಈ ಓ ಬಿ ಕೆ ಸಿದ್ದನಗೌಡ ತಿಳಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಿ ಬೋಗಾ ರೆಡ್ಡಿ ಮತ್ತು ಉಪಾಧ್ಯಕ್ಷರಾದ ಬಿ ವಿರುಪಾಕ್ಷಗೌಡ ಮಾತನಾಡಿ 1995 ರಿಂದ ನಮ್ಮನ್ನು ಸಹಕಾರ ಸಂಘದ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿರುತ್ತಾರೆ ಇದಕ್ಕಾಗಿ ನಾವು ಕಾರ್ಯಕಲ್ಲು ಮತ್ತು ವೀರಾಪುರ ಗ್ರಾಮದ ಸಂಘದ ಸದಸ್ಯರಿಗೆ ಕೃತಜ್ಞತೆಗಳನ್ನು ತಿಳಿಸುತ್ತೇನೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 