ಮಹಿಳೆಯರಿಗೆ ಆತ್ಮರಕ್ಷಣೆ ಅತ್ಯಗತ್ಯ: ಪ್ರೊ. ಹನುಮಂತಯ್ಯ ಪೂಜಾರಿ
Self-defense is essential for women: Prof. Hanumanthaiyya Poojary
ವಿಜಯಪುರ 27: ಆತ್ಮರಕ್ಷಣೆ ಮಹಿಳೆಯರಿಗೆ ಅತ್ಯಗತ್ಯ ಎಂದು ಮಹಿಳಾ ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಮುಖ್ಯಸ್ಥ ಪ್ರೊ. ಹನುಮಂತಯ್ಯ ಪೂಜಾರಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ ಸಹಯೋಗದಲ್ಲಿ ಪಿ.ಎಂ.ಉಷಾ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ “ಆತ್ಮರಕ್ಷಣಾ” ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಆತ್ಮರಕ್ಷಣೆ ಎನ್ನುವುದು ಒಂದು ಕಲೆ. ಇಂದಿನ ಯುಗದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ಗಮನಿಸಿದರೆ, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಸದೃಢ ದೇಹದಲ್ಲಿ ಸದೃಢ ಮನಸ್ಸು ಇರಬೇಕು. ಅದರ ಜೊತೆಗೆ ಕೌಶಲ್ಯವೂ ಅಗತ್ಯ. ಇಂದಿನ ಪುರುಷಪ್ರಧಾನ ಸಮಾಜದಲ್ಲಿ ಮಹಿಳೆಯರು ತಮ್ಮ ಸಾಧನೆಗಳ ಮೂಲಕ ಎಲ್ಲರಿಗೂ ಮಾದರಿಯಾಗಬೇಕು. ಮೇರಿಕೊಮ್, ಮೀರಾ ಪೊಘಾಟ್, ಕಣಂರ್ ಮಲ್ಲೇಶ್ವರಿಯವರಂತೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧಕಿಯರಾಗಿ ಬೆಳೆಯಲು ಮಹಿಳೆಯರು ಮುಂದಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪ್ರಾಧ್ಯಾಪಕ ಡಾ. ಎಸ್. ಎಸ್. ರಾಜಮಾನೆ ಮಾತನಾಡಿ, ನಿರ್ಭಯ ಘಟನೆಗಳಂತಹ ಕಹಿ ಘಟನೆಗಳು ಪುನರಾವರ್ತನೆಗೊಳ್ಳಬಾರದೆಂದರೆ ಮಹಿಳೆಯರು ಆತ್ಮರಕ್ಷಣೆಯ ಕಲೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಹೇಳಿದರು.
ದುರ್ಗೇಶ ಆಹೇರಿ ಮಾತನಾಡಿ, ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ತರಬೇತಿ ನೀಡಿದರು. ಐ.ಕ್ಯೂಎ.ಸಿ.ಯ ಸಂಚಾಲಕ ಡಾ. ಅನಂತ ಪದ್ಮನಾಭ ಹಾಗೂ ಆತ್ಮರಕ್ಷಣಾ ತರಬೇತುದಾರ ದುರ್ಗೇಶ ಆಹೇರಿ, ಡಾ. ಭಾರತಿ ಹೊಸಟ್ಟಿ, ವಿದ್ಯಾರ್ಥಿನಿಯರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸ್ವಾತಿ ಸ್ವಾಗತ ಗೀತೆ ಹಾಡಿದರು. ಕ್ರೀಡಾ ನಿರ್ದೇಶಕ ಡಾ. ಸುನೀಲ ನಡಕಟ್ಟಿ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ.ಪಿ.ಬಿ.ಬಿರಾದಾರ ನಿರೂಪಿಸಿದರು. ಡಾ. ವಿಶ್ವನಾಥ ನಡಕಟ್ಟಿ ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 