ಕವಿವಿ ಯಲ್ಲಿ ಗಾಂಧಿ ಅಧ್ಯಯನ ವಿಭಾಗದಿಂದ ವಿಚಾರ ಸಂಕಿರಣ ಮತ್ತು ನಾಟಕ ಪ್ರದರ್ಶನ
Seminar and drama performance by the Gandhian Studies Department at Kavivi
ಧಾರವಾಡ ಮಾ.11: ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ವಿಭಾಗ, ಕ.ವಿ.ವಿ ಶಿಕ್ಷಣ ಮಹಾವಿದ್ಯಾಲಯ ಎನ್.ಎಸ್.ಎಸ್ ಘಟಕ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ರಂಗಾಯಣ, ಧಾರವಾಡ ಇವರ ಸಹಯೋಗದೊಂದಿಗೆ ಗಾಂಧಿ ಪುಣ್ಯತಿಥಿ ಹಾಗೂ 'ಗಾಂಧಿ ಭಾರತ' ಕಾರ್ಯಕ್ರಮದ ಅಂಗವಾಗಿ ಒಂದು ದಿನದ ವಿಚಾರ ಸಂಕಿರಣ ಮತ್ತು ನಾಟಕ ಪ್ರದರ್ಶನ ಏರಿ್ಡಸಲಾಗಿದೆ. ವಿಚಾರ ಸಂಕಿರಣ ಮಾರ್ಚ 10, 2026 ರಂದು ಬೆಳಿಗ್ಗೆ 10:00 ಗಂಟೆಗೆ ಕವಿವಿ ಯ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಜರುಗಲಿದೆ.
ಉದ್ಘಾಟನ ಸಮಾರಂಭದ ದಿವ್ಯಸಾನಿಧ್ಯವನ್ನು ಗದುಗಿನ ತೋಂಟದಾರ್ಯ ಮಠದ ಪೂಜ್ಯ ಶ್ರೀ ಸಿದ್ದರಾಮ ಸ್ವಾಮೀಜಿಯವರು ವಹಿಸಲಿದ್ದು ಉದ್ಘಾಟನೆಯನ್ನು ಕವಿವಿ ಕುಲಪತಿ ಪ್ರೊ. ಎ.ಎಂ.ಖಾನ್ ಅವರು ನೆರವೇರಿಸುವರು. ಸಮಾಜ ವಿಜ್ಞಾನ ನಿಕಾಯದ ಡೀನರು ಮತ್ತು ಗಾಂಧಿ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೋ. ಶೌಖತ್ ಅಝೀಮ ಅವರು ಕಾರ್ಯಕ್ರಮದ ಅಧಕ್ಷತೆ ವಹಿಸುವರು. ಎಲ್ಲ ಸಿಂಡಿಕೇಟ್ ಸದಸ್ಯರುಗಳು ಉಪಸ್ಥಿತರಿರುವರು.
ಸಂಪನ್ಮೂಲ ವ್ಯಕ್ತಿಯಾಗಿ ಹುಬ್ಬಳ್ಳಿಯ ತರಬೇತುದಾರರು ಹಾಗೂ ಆಪ್ತಸಮಾಲೋಚಕರಾದಡಾ. ಗುರುರಾಜ್ ಪಾಟೀಲ್ ಆಗಮಿಸುವರು. ಹಿರಿಯ ಲೇಖಕರು ಹಾಗೂ ಧಾರವಾಡದ ವಿಶ್ರಾಂತ ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀ ವೆಂಕಟೇಶ್ ಮಾಚಕನೂರ ಅಧ್ಯಕ್ಷತೆ ವಹಿಸುವರು. ಡಾ.ಅರವಿಂದ್ ಕರಬಸನಗೌಡರ, ಡಾ. ಸುರೇಶ ಸಮ್ಮಸಗಿ ಹಾಗೂ ಡಾ. ನಾಗರಾಜ್ ತಳವಾರ ಪ್ರತಿಕ್ರಿಯ ನೀಡುವರು. ಮ.3-00ರಿಂದ ಅದೇ ಸಭಾಭವನದಲ್ಲಿ " ಮರಳಿ ಮಹಾತ್ಮನೆಡೆಗೆ" ನಾಟಕ ಪ್ರದರ್ಶನ ಜರುಗುವದು. ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನಲೆಯಲ್ಲಿ ಧಾರವಾಡ ರಂಗಾಯಣದ ರೆಪರ್ಟರಿ ಕಲಾವಿದರು ವಿಶೇಷವಾಗಿ ಸಿದ್ಧಪಡಿಸಿದ ನಾಟಕದ ಪ್ರಥಮ ಪ್ರಯೋಗ ಇದಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 