ಗುರುವಿನ ಸೇವೆ ಮಾಡಿದರೆ ಪುಣ್ಯ ಪ್ರಾಪ್ತಿ: ಸೋಮೇಶ್ವರ ಸ್ವಾಮೀಜಿ
Serving the Guru will bring you merit: Someshwara Swamiji
ಮಹಾಲಿಂಗಪುರ 18: ಗುರುವಿನ ಸೇವೆ ಮಾಡಿದರೆ ನಮಗೆ ಸ್ವಲ್ಪಾವಾದರೂ ಪುಣ್ಯ ದೊರೆಯುತ್ತದೆ ಎಂದು ಯಾದಗಿರಿ ಜಿಲ್ಲೆಯ ಸೈದಾಪುರದ ಸಿದ್ದಾರೂಢ ಮಠದ ಸೋಮೇಶ್ವರ ಮಹಾಸ್ವಾಮಿಗಳು ಹೇಳಿದರು.
ನಗರದ ಬಸವ ನಗರದ ಬಸವೇಶ್ವರ ಸಮುದಾಯ ಭವನದಲ್ಲಿ ನಡೆದ ಸಿದ್ದಾರೂಢರ 258 ನೇ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಸಿದ್ದಾರೂಢರ ಮತ್ತು ಗುರುನಾಥರೂಢರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ಗುರುವಿಗಿಂತಲೂ ಅಧಿಕವಾದ ತತ್ತ್ವವಿಲ್ಲ, ಗುರುವಿಗಿಂತಲೂ ಅಧಿಕವಾದ ತಪಸ್ಸಿಲ್ಲ, ತತ್ವಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು ಯಾವುದೂ ಇಲ್ಲ. ಆದ್ದರಿಂದ ಶ್ರೀಗುರುವನ್ನು ನಮಿಸುತ್ತೇವೆ ಎಂದರು.
ನಗರದ ಸಿದ್ದಾರೂಢ ಮಠದ ಸಹಜಾನಂದ ಸ್ವಾಮೀಜಿ ಮಾತನಾಡಿ ಗುರುಶಕ್ತಿಯನ್ನು ಮೀರಿದ್ದು ಈ ಜಗತ್ತಿನಲ್ಲಿ ಇನ್ನಾವುದೂ ಇಲ್ಲ. ತನ್ನೆಡೆಗೆ ಬಂದ ಪುಣ್ಯಾತ್ಮರನ್ನು ಆತ ಸಂತೋಷದಿಂದ ಮತ್ತು ಪಾಪಾತ್ಮರನ್ನೂ ಕಡೆಗಣಿಸದೆ ಕರುಣೆಯಿಂದ ಸ್ವೀಕರಿಸುವ ವಿಧಾನವೇ ಆಲೋಚನೆ ಯೋಗ್ಯವಾದದ್ದು. ಕೈಯಲ್ಲಿ ಬಿಡಿಗಾಸಿಲ್ಲದವನನ್ನು ಅಥವಾ ಹೊಟ್ಟೆಗೆ ತುತ್ತು ಅನ್ನವಿಲ್ಲದವನನ್ನು ಜನರು ‘ದೀನ’ ಎಂದೇ ಗುರ್ತಿಸಿರಬಹುದಾದರೂ ಗುರುಕೃಪೆ ಇಲ್ಲದವನಿಗಿಂತ ದೀನ ಮತ್ತೊಬ್ಬನಿಲ್ಲ ಎಂದರು.
ಪುಸ್ತಕ ಬಿಡುಗಡೆ : ಸಮಾಜ ಸೇವಕ ದೀನ ದಲಿತರ ಬಂಧು, ಚನ್ನಬಸು ಹುರಕಡ್ಲಿ ಅವರ ಸಮಾಜಮುಖಿ ಜೀವನ ಕುರಿತು ಯುವ ಲೇಖಕ ಶಿವಾನಂದ ನೇಗಿನಾಳ ಬರೆದ "ಮಿಡಿದ ಮನಸ್ಸು’ ಪುಸ್ತಕವನ್ನು ಸೋಮೇಶ್ವರ ಸ್ವಾಮೀಜಿ ಸಹಜಾನಂದ ಸ್ವಾಮೀಜಿ ಬಿಜೆಪಿ ಮುಖಂಡರಾದ ಮಹಾಂತೇಶ ಹಿಟ್ಟಿನಮಠ ಕಾಂಗ್ರೆಸ್ ಮುಖಂಡರಾದ ಸಿದ್ದು ಕೊಣ್ಣೂರ ಮತ್ತು ವೇದಿಕೆ ಮೇಲಿದ್ದ ಗಣ್ಯರು ಬಿಡುಗಡೆ ಮಾಡಿದರು. ಮಲ್ಲಪ್ಪ ಕಟಗಿ, ಶಿವಾನಂದ ನೇಗಿನಾಳ, ಚನ್ನಬಸು ಹುರಕಡ್ಲಿ, ಮ ಕೃ ಮೆಗಾಡಿ, ಭಾಗ್ಯಶ್ರೀ ಕೋಟಿ, ಶ್ರೀಶೈಲಪ್ಪ ಉಳ್ಳಾಗಡ್ಡಿ, ಡಾ ಕಲ್ಲೇದ ಡಾ ರಾಘವೇಂದ್ರ ಸೇರಿದಂತೆ ಹಲವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 