ಗುರುವಿನ ಸೇವೆ ಮಾಡಿದರೆ ಪುಣ್ಯ ಪ್ರಾಪ್ತಿ: ಸೋಮೇಶ್ವರ ಸ್ವಾಮೀಜಿ
Serving the Guru will bring you merit: Someshwara Swamiji
ಮಹಾಲಿಂಗಪುರ 18: ಗುರುವಿನ ಸೇವೆ ಮಾಡಿದರೆ ನಮಗೆ ಸ್ವಲ್ಪಾವಾದರೂ ಪುಣ್ಯ ದೊರೆಯುತ್ತದೆ ಎಂದು ಯಾದಗಿರಿ ಜಿಲ್ಲೆಯ ಸೈದಾಪುರದ ಸಿದ್ದಾರೂಢ ಮಠದ ಸೋಮೇಶ್ವರ ಮಹಾಸ್ವಾಮಿಗಳು ಹೇಳಿದರು.
ನಗರದ ಬಸವ ನಗರದ ಬಸವೇಶ್ವರ ಸಮುದಾಯ ಭವನದಲ್ಲಿ ನಡೆದ ಸಿದ್ದಾರೂಢರ 258 ನೇ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಸಿದ್ದಾರೂಢರ ಮತ್ತು ಗುರುನಾಥರೂಢರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ಗುರುವಿಗಿಂತಲೂ ಅಧಿಕವಾದ ತತ್ತ್ವವಿಲ್ಲ, ಗುರುವಿಗಿಂತಲೂ ಅಧಿಕವಾದ ತಪಸ್ಸಿಲ್ಲ, ತತ್ವಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು ಯಾವುದೂ ಇಲ್ಲ. ಆದ್ದರಿಂದ ಶ್ರೀಗುರುವನ್ನು ನಮಿಸುತ್ತೇವೆ ಎಂದರು.
ನಗರದ ಸಿದ್ದಾರೂಢ ಮಠದ ಸಹಜಾನಂದ ಸ್ವಾಮೀಜಿ ಮಾತನಾಡಿ ಗುರುಶಕ್ತಿಯನ್ನು ಮೀರಿದ್ದು ಈ ಜಗತ್ತಿನಲ್ಲಿ ಇನ್ನಾವುದೂ ಇಲ್ಲ. ತನ್ನೆಡೆಗೆ ಬಂದ ಪುಣ್ಯಾತ್ಮರನ್ನು ಆತ ಸಂತೋಷದಿಂದ ಮತ್ತು ಪಾಪಾತ್ಮರನ್ನೂ ಕಡೆಗಣಿಸದೆ ಕರುಣೆಯಿಂದ ಸ್ವೀಕರಿಸುವ ವಿಧಾನವೇ ಆಲೋಚನೆ ಯೋಗ್ಯವಾದದ್ದು. ಕೈಯಲ್ಲಿ ಬಿಡಿಗಾಸಿಲ್ಲದವನನ್ನು ಅಥವಾ ಹೊಟ್ಟೆಗೆ ತುತ್ತು ಅನ್ನವಿಲ್ಲದವನನ್ನು ಜನರು ‘ದೀನ’ ಎಂದೇ ಗುರ್ತಿಸಿರಬಹುದಾದರೂ ಗುರುಕೃಪೆ ಇಲ್ಲದವನಿಗಿಂತ ದೀನ ಮತ್ತೊಬ್ಬನಿಲ್ಲ ಎಂದರು.
ಪುಸ್ತಕ ಬಿಡುಗಡೆ : ಸಮಾಜ ಸೇವಕ ದೀನ ದಲಿತರ ಬಂಧು, ಚನ್ನಬಸು ಹುರಕಡ್ಲಿ ಅವರ ಸಮಾಜಮುಖಿ ಜೀವನ ಕುರಿತು ಯುವ ಲೇಖಕ ಶಿವಾನಂದ ನೇಗಿನಾಳ ಬರೆದ "ಮಿಡಿದ ಮನಸ್ಸು’ ಪುಸ್ತಕವನ್ನು ಸೋಮೇಶ್ವರ ಸ್ವಾಮೀಜಿ ಸಹಜಾನಂದ ಸ್ವಾಮೀಜಿ ಬಿಜೆಪಿ ಮುಖಂಡರಾದ ಮಹಾಂತೇಶ ಹಿಟ್ಟಿನಮಠ ಕಾಂಗ್ರೆಸ್ ಮುಖಂಡರಾದ ಸಿದ್ದು ಕೊಣ್ಣೂರ ಮತ್ತು ವೇದಿಕೆ ಮೇಲಿದ್ದ ಗಣ್ಯರು ಬಿಡುಗಡೆ ಮಾಡಿದರು. ಮಲ್ಲಪ್ಪ ಕಟಗಿ, ಶಿವಾನಂದ ನೇಗಿನಾಳ, ಚನ್ನಬಸು ಹುರಕಡ್ಲಿ, ಮ ಕೃ ಮೆಗಾಡಿ, ಭಾಗ್ಯಶ್ರೀ ಕೋಟಿ, ಶ್ರೀಶೈಲಪ್ಪ ಉಳ್ಳಾಗಡ್ಡಿ, ಡಾ ಕಲ್ಲೇದ ಡಾ ರಾಘವೇಂದ್ರ ಸೇರಿದಂತೆ ಹಲವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 