ಬುದ್ಧಿಮಾಂದ್ಯಳಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ
Sexual assault on mentally retarded woman: Accused gets life sentence
ಬೆಳಗಾವಿ 22: ಪರಿಶಿಷ್ಟ ಜಾತಿಯ ಬುದ್ಧಿಮಾಂದ್ಯ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಇಲ್ಲಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಹುಸೇನಸಾಬ ಇಮಾಮಸಾಬ ನದಾಫ ಉರ್ಫ್ ಪಿಂಜಾರ ಶಿಕ್ಷೆಗೊಳಗಾದ ಆರೋಪಿ. ಕಟಕೋಳ ಪೊಲೀಸ್ ಠಾಣಾ ಹದ್ದಿಯ ಪೈಕಿ ಚಿಪ್ಪಲಕಟ್ಟಿ ಗ್ರಾಮದ ಪಿರ್ಯಾದಿದಾರಳ ಮನೆಯ ಮುಂದಿನ ಕಟ್ಟೆಯ ಮೇಲೆ ದಿ. 26-03-2021ರಂದು ಸಂಜೆ 5 ಗಂಟೆಗೆ ಆರೋಪಿತ ಕೃತ್ಯ ಎಸಗಿದ್ದಾನೆ.
ಯುವತಿ ಬುದ್ದಿಮಾಂದ್ಯಳು, ಹಿಂದೂ ಪರಿಶಿಷ್ಟ ಪಂಗಡಕ್ಕೆ ಸೇರಿದವಳು ಎಂದು ಗೊತ್ತಿದ್ದರೂ ಆರೋಪಿತನು ಪಿರ್ಯಾದಿದಾರಳ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧದ ಬಗ್ಗೆ ಆಗಿನ ತನಿಖಾಧಿಕಾರಿ ರಾಮದುರ್ಗದ ಡಿಎಸ್ಪಿ ರಾಮನಗೌಡ ಹಟ್ಟಿ ತನಿಖೆ ಕೈಗೊಂಡು ಕಲಂ 376(2)(ಎಲ್) ಐಪಿಸಿ ಮತ್ತು ಕಲಂ. 3(1)(ಡಬ್ಲೂ)(ಐ), 3(2)(5) ಎಸ್ಸಿ/ಎಸ್ಟಿ (ಪಿ.ಓ.ಎ) ತಿದ್ದುಪಡಿ ಕಾಯ್ದೆ 2015 ಅಡಿಯಲ್ಲಿ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.
ಮಾನ್ಯ ನ್ಯಾಯಾಧೀಶರಾದ ಸವಿತಾಕುಮಾರಿ ಎನ್., 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ಅವರು ಪ್ರಕರಣದ ವಿಚಾರಣೆ ಮಾಡಿ ಆರೋಪಿ ಮೇಲೆ ಆರೋಪಣೆಗಳು ಸಾಬೀತಾಗಿವೆ ಎಂದು ತೀಪು ನೀಡಿ, ಆರೋಪಿತನಿಗೆ ಕಲಂ. 376(2)(ಎಲ್) ಐಪಿಸಿರ ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 5,000 ದಂಡ, ಕಲಂ 3(1)(ಡಬ್ಲೂ)(ಐ)ರ ಅಡಿಯಲ್ಲಿ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ಕಲಂ. 3(2)(5) ಎಸ್ಸಿ/ಎಸ್ಟಿ (ಪಿ.ಓ.ಎ) ತಿದ್ದುಪಡಿ ಕಾಯ್ದೆ 2015ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ. 5,000 ದಂಡ ವಿಧಿಸಿ ಪ್ರಕರಣದ ತೀರ್ು ನೀಡಿದ್ದಾರೆ. ಸರಕಾರದ ಪರವಾಗಿ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಆರ್.ಜಿ.ದೇವರೆಡ್ಡಿ ಪ್ರಕರಣ ನಡೆಸಿ ವಾದ ಮಂಡಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 