ಶೇಡಬಾಳ ಆದಿನಾಥ ತೀರ್ಥಂಕರ ಜೈನ ಮಂದಿರದ ವಾಷರ್ಿಕೋತ್ಸವ
ಶೇಡಬಾಳ 25: ಶೇಡಬಾಳ ಪಟ್ಟಣದ ಶಾಂತಿಸಾಗರ ದಿಗಂಬರ ಜೈನ ಆಶ್ರಮದಲ್ಲಿರುವ ಆದಿನಾಥ ತೀರ್ಥಂಕರ ಜೈನ ಮಂದಿರದ 71 ನೇ ವಾಷರ್ಿಕೋತ್ಸವ ಪೂಜಾ ಕಾರ್ಯಕ್ರಮ ಸೋಮವಾರ ದಿ. 25 ರಂದು ಶ್ರದ್ಧಾ ಭಕ್ತಿಯಿಂದ ಜರುಗಿತು.
ಜೈನ ಸಂಸ್ಕೃತಿಯ ಅತೀ ಪ್ರಾಚೀನ ನಾಂದಣಿ ಧರ್ಮ ಪೀಠದ ಭಟ್ಟಾರಕ ಪಟ್ಟಾಚಾರ್ಯ ಜಿನಸೇನ ಸ್ವಾಮಿಜಿಯವರ ಆದೇಶದಂತೆ ಈ ವಾಷರ್ಿಕ ಪೂಜಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮುಂಜಾನೆ 6 ಗಂಟೆಗೆ ಅಂಬಾರಿ ಹೊತ್ತ ಆನೆಯ ಮೇಲೆ ಜಿನಶಾಸನದ ಧ್ವಜದ ಮೆರವಣಿಗೆ ಜರುಗಿತು. ವಾದ್ಯ ವೈಭವದೊಂದಿಗೆ ಪ್ರಾರಂಭವಾದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. 8 ಗಂಟೆಗೆ ಧ್ವಜವಂದನೆ ಕಾರ್ಯಕ್ರಮ ಜರುಗಿತು. 10 ಗಂಟೆಗೆ ಭಗವಾನ ಆದಿನಾಥ ತೀರ್ಥಂಕರರಿಗೆ ಅಭಿಷೇಕ, ಅಷ್ಟಕ ಪೂಜೆ ಮೊದಲಾದ ಧಾಮರ್ಿಕ ಕಾರ್ಯಕ್ರಮಗಳು ಜರುಗಿದವು.
ಸಾಯಂಕಾಲ 5 ಗಂಟೆಗೆ ಮಂಗಲ ಕುಂಭ ಮೆರವಣಿಗೆ 108 ಕಲಶಗಳಿಂದ ಭಗವಂತರಿಗೆ ಅಭಿಷೇಕ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಶ್ರಾವಕ ಶ್ರಾವಕಿಯರು, ಗ್ರಾಮಸ್ಥರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 