ಶಾಹಿದ್ ಖಾಜಿಗೆ ಕರುನಾಡ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಕೊಪ್ಪಳ 20: ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು, ಕರ್ಮಭೂಮಿ ಕನ್ನಡ ಸಂಘ ಬಿಚ್ಚೊಲಿ, ಗೋವಾ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಗೋವಾದ ಬಿಚ್ಚೋಲಿ ನಗರದ ಹೀರಾಬಾಯಿ ಹಾಲ್ನಲ್ಲಿ 11ನೇ ಬಾರಿಗೆ ಜರುಗಿದ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದಲ್ಲಿ ಹುಬ್ಬಳ್ಳಿ ನಿವಾಸಿ ಬೆಂಗಳೂರಿನ ಕರ್ನಾಟಕ ಉರ್ದು ಅಕ್ಯಾಡಮಿ ಸದಸ್ಯ ಹಾಗೂ ಉರ್ದು ಪತ್ರಕರ್ತ ಶಾಹಿದ್ ಖಾಜಿ ಇವರಿಗೆ ಕರುನಾಡ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರಕಾರದ ಆಯೂಶ್ ಇಲಾಖೆ ಮಂತ್ರಿ ಪ್ರಮೊಧ ನಾಯಕ ರವರು ಗೋವಾ ಕನ್ನಡಿಗರ ಪರವಾಗಿ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಿದರು.
ಶಾಹಿದ್ ಖಾಜಿರವರು ಝೀ ಸಲಾಂ ವಾರ್ತೆಯ ಪ್ರತಿನಿಧಿಯಾಗಿ ಹಾಗೂ ಉರ್ದು ಭಾಷೆಯ ಅಭಿವೃಧ್ದಿಗಾಗಿ ಶ್ರಮಿಸಿದ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು, ಈ ಸಂದರ್ಭದಲ್ಲಿ ಕೇಂಧ್ರದ ಆಯುಶ ಇಲಾಖೆ ಮಂತ್ರಿ ಪ್ರಮೊಧ ನಾಯ್ಕೆ, ಬಿಚ್ಚೊಲಿ ಮಾಯಂ ಕ್ಷೇತ್ರದ ಶಾಸಕ ರಾಜೇಶ ಪಾಟ್ನೇಕರ್, ಸಮ್ಮೇಳನದ ಸರ್ವಾಧ್ಯಕ್ಷ ಡಾ. ವಿ.ಆರ್.ತಾಳಿಕೋಟಿ, ಕರ್ಮ ಭೂಮಿ ಕನ್ನಡ ಸಂಘ, ಗೋವಾದ ಅಧ್ಯಕ್ಷ ಹನುಮಂತ ರೆಡ್ಡಿ ಶಿರೂರ್, ಗೋವಾ ಕನ್ನಡಿಗರ ನಾಯಕ ಸಿದ್ದಣ್ಣ ಮೇಟಿ, ಬಿಚ್ಚೋಲಿ ನಗರಸಭೆ ಅಧ್ಯಕಕ್ಷ ಸತೀಷ್ ಗಾಂವ್ಕರ್, ಮಾಜಿ ಶಾಸಕ ನರೇಶ್ ಸಾವಾಳ್, ಸಂಘಟಕ ಮಹೇಶ ಸುರ್ವೆ ಹಾಗೂ ತಿರುಳುಗನ್ನಡ ಸಾಹಿತ್ಯ ಪರತಿಷ್ಠಾನದ ಜಿಲ್ಲಾಧ್ಯಕ್ಷ ಎಂ. ಸಾದಿಕ ಅಲಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 