ಶಾರದಾ ಚಿಟ್ ಫಂಡ್: ರಾಜೀವ್ ಕುಮಾರ ಕಸ್ಟಡಿ ವಿಚಾರಣೆಯ ಅಗತ್ಯ ಪ್ರಶ್ನಿಸಿದ ಸುಪ್ರೀಂಕೋರ್ಟ್
ನವದೆಹಲಿ, ಏ 30 ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಕೋಲ್ಕತ್ತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ಕಸ್ಟಡಿ ವಿಚಾರಣೆಯ ಅಗತ್ಯವೇನು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ನೇತೃತ್ವದ ಮೂವರುನ್ಯಾಯಮೂರ್ತಿಗಳ ಪೀಠ, ಕುಮಾರ್ ಅವರ ಕಸ್ಟಡಿ ವಿಚಾರಣೆ ಅಗತ್ಯ ಇರುವುದಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿ ಎಂದು ಸಿಬಿಐಗೆ ಸೂಚಿಸಿದೆ. ಸಾಲಿಸಿಟರ್ ಜನರಲ್ ತಶೂರ್ ಮೆಹ್ತಾ ಅವರು ದಾಖಲೆ ಒದಗಿಸಲು ನಾಳೆಯವರೆಗೆ ಸಮಯಾವಕಾಶ ನೀಡುವಂತೆ ಕೋರಿದರು. ವಿಚಾರಣೆಯನ್ನು ನಾಳೆಗೆ ಮುಂದೂಡಲಾಯಿತು. ಕಳೆದ ವಾರ, ರಾಜೀವ್ ಕುಮಾರ್ ಅವರು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಸಿಬಿಐನೊಂದಿಗೆ ವಿಚಾರಣೆಗೆ ಸಹಕರಿಸುತ್ತಿದ್ದು, ಹೀಗಿರುವಾಗ ಕಸ್ಟಡಿ ವಿಚಾರಣೆಯ ಅಗತ್ಯವಿಲ್ಲ ಎಂದು ತಿಳಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 