ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಶಶಾಂಕ ಆಯ್ಕೆ
ರಾಷ್ಟ್ರಮಟ್ಟಕ್ಕೆ ಶಶಾಂಕ ಆಯ್ಕೆ
ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಶಶಾಂಕ ಆಯ್ಕೆ
ಖಾನಾಪುರ 25: ತಾಲೂಕಿನ ಹಿರೇಮುನವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶಶಾಂಕ ಸುರೇಶ ನಿಂಬಾಳಕರ ಕಳೆದ ನ.21ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈ ವಿದ್ಯಾರ್ಥಿಗೆ ಶಾಲೆಯ ಕ್ರೀಡಾ ಶಿಕ್ಷಕ ಬಿ.ಕೆ.ಪಾಟೀಲ ಮಾರ್ಗದರ್ಶನ ನೀಡಿದ್ದರು. ಗ್ರಾಮೀಣ ಭಾಗದಿಂದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮೊದಲ ವಿದ್ಯಾರ್ಥಿ ಎಂಬ ಹಿರಿಮೆಗೆ ಶಶಾಂಕ ಪಾತ್ರನಾಗಿದ್ದು, ವಿದ್ಯಾರ್ಥಿಯ ಸಾಧನೆಗೆ ಶಾಸಕ ವಿಠ್ಠಲ ಹಲಗೇಕರ, ಬಿಆರ್ಸಿ ಸಮನ್ವಯ ಅಧಿಕಾರಿ ಎ.ಬಿ.ಅಂಬಗಿ, ಶಾಲೆಯ ಎಸ್.ಡಿ. ಎಂ.ಸಿ ಪದಾಧಿಕಾರಿಗಳು, ಮುಖ್ಯಾಧ್ಯಾಪಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 