ಶೇಡಬಾಳ ಪಪಂ: ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಶಾಸಕ ರಾಜು ಕಾಗೆ ವಿತರಣೆ
Shedabala Papam: Distribution of three wheeler vehicle to MLA Raju Ka for special needs
ಶೇಡಬಾಳ ಪಪಂ: ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಶಾಸಕ ರಾಜು ಕಾಗೆ ವಿತರಣೆ
ಕಾಗವಾಡ 01: ನಮ್ಮ ದೇಶದಲ್ಲಿ ಎಲ್ಲರಿಗೂ ಸಮಾನವಾಗಿ ಬದಕುವ ಹಕ್ಕು ಇದ್ದು, ಅದರಂತೆ ವಿಶೇಷ ಚೇತನರೂ ಸಹ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿ, ಅವರಿಗೂ ಸಹ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಸಹಕಾರ ನೀಡಲಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ಅವರು, ಶನಿವಾರ ದಿ.01 ರಂದು ಶೇಡಬಾಳ ಪಟ್ಟಣ ಪಂಚಾಯತಿಯ ವತಿಯಿಂದ ಪಟ್ಟಣದ 5 ಜನ ವಿಶೇಷ ಚೇತನರಿಗೆ ಎಸ್ಎಫ್ಸಿ ಯೋಜನೆಯ ಅನುದಾನದಡಿ ಮಂಜೂರಾದ ತ್ರಿಚಕ್ರ ವಾಹನ ವಿತರಿಸಿ, ಮಾತನಾಡುತ್ತಿದ್ದರು. ಕೇತ್ರದ ಅಭಿವೃದ್ಧಿಗಾಗಿ ಅನುದಾನ ಕೊರೆತೆ ಇಲ್ಲ. ಈಗ ಮುಖ್ಯಮಂತ್ರಿಗಳು ರಾಜ್ಯದ ಪ್ರತಿ ಶಾಸಕರಿಗೆ 10 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಕೇತ್ರದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದ್ದು, ಈಗಿನ 10 ಕೋಟಿ ಅನುದಾನವನ್ನು ಬಸವೇಶ್ವರ ಯಾತ ನೀರಾವರಿ ಯೋಜನೆಗೆ ವಿನಯೋಗಿಸಲು ಚಿಂತನೆ ನಡೆಸಲಾಗಿದೆ ಎಂದರು.
ಈ ಸಮಯದಲ್ಲಿ ಪ.ಪಂ. ಅಧ್ಯಕ್ಷ ಉತ್ಕರ್ಷ ಪಾಟೀಲ, ಉಪಾಧ್ಯಕ್ಷೆ ದೀಪಾ ಹೊನಕಾಂಬಳೆ, ಮುಖಂಡರಾದ ವಿನೋದ ಬರಗಾಲೆ, ಸಚೀನ ಜಗತಾಪ, ಮಹಾವೀರ ಗಣೆ, ಅಣ್ಣಾ ಅರವಾಡೆ, ವೃಷಭ ಚೌಗುಲಾ, ಪ್ರಕಾಶ ಮಾಳಿ, ಸಂಜು ಮುಕುಂದ, ಮುದಕಪ್ಪ ಮಾಳಗಿ ಸೇರಿದಂತೆ ಪ.ಪಂಚಾಯತಿಯ ಎಲ್ಲ ಸದಸ್ಯರು, ಮುಖ್ಯಾಧಿಕಾರಿ ಸುರೇಶ ಪತ್ತಾರ ಮತ್ತು ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 