ಶೇಡಬಾಳ ಪಪಂ: ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಶಾಸಕ ರಾಜು ಕಾಗೆ ವಿತರಣೆ
Shedabala Papam: Distribution of three wheeler vehicle to MLA Raju Ka for special needs
ಶೇಡಬಾಳ ಪಪಂ: ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಶಾಸಕ ರಾಜು ಕಾಗೆ ವಿತರಣೆ
ಕಾಗವಾಡ 01: ನಮ್ಮ ದೇಶದಲ್ಲಿ ಎಲ್ಲರಿಗೂ ಸಮಾನವಾಗಿ ಬದಕುವ ಹಕ್ಕು ಇದ್ದು, ಅದರಂತೆ ವಿಶೇಷ ಚೇತನರೂ ಸಹ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿ, ಅವರಿಗೂ ಸಹ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಸಹಕಾರ ನೀಡಲಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ಅವರು, ಶನಿವಾರ ದಿ.01 ರಂದು ಶೇಡಬಾಳ ಪಟ್ಟಣ ಪಂಚಾಯತಿಯ ವತಿಯಿಂದ ಪಟ್ಟಣದ 5 ಜನ ವಿಶೇಷ ಚೇತನರಿಗೆ ಎಸ್ಎಫ್ಸಿ ಯೋಜನೆಯ ಅನುದಾನದಡಿ ಮಂಜೂರಾದ ತ್ರಿಚಕ್ರ ವಾಹನ ವಿತರಿಸಿ, ಮಾತನಾಡುತ್ತಿದ್ದರು. ಕೇತ್ರದ ಅಭಿವೃದ್ಧಿಗಾಗಿ ಅನುದಾನ ಕೊರೆತೆ ಇಲ್ಲ. ಈಗ ಮುಖ್ಯಮಂತ್ರಿಗಳು ರಾಜ್ಯದ ಪ್ರತಿ ಶಾಸಕರಿಗೆ 10 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಕೇತ್ರದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದ್ದು, ಈಗಿನ 10 ಕೋಟಿ ಅನುದಾನವನ್ನು ಬಸವೇಶ್ವರ ಯಾತ ನೀರಾವರಿ ಯೋಜನೆಗೆ ವಿನಯೋಗಿಸಲು ಚಿಂತನೆ ನಡೆಸಲಾಗಿದೆ ಎಂದರು.
ಈ ಸಮಯದಲ್ಲಿ ಪ.ಪಂ. ಅಧ್ಯಕ್ಷ ಉತ್ಕರ್ಷ ಪಾಟೀಲ, ಉಪಾಧ್ಯಕ್ಷೆ ದೀಪಾ ಹೊನಕಾಂಬಳೆ, ಮುಖಂಡರಾದ ವಿನೋದ ಬರಗಾಲೆ, ಸಚೀನ ಜಗತಾಪ, ಮಹಾವೀರ ಗಣೆ, ಅಣ್ಣಾ ಅರವಾಡೆ, ವೃಷಭ ಚೌಗುಲಾ, ಪ್ರಕಾಶ ಮಾಳಿ, ಸಂಜು ಮುಕುಂದ, ಮುದಕಪ್ಪ ಮಾಳಗಿ ಸೇರಿದಂತೆ ಪ.ಪಂಚಾಯತಿಯ ಎಲ್ಲ ಸದಸ್ಯರು, ಮುಖ್ಯಾಧಿಕಾರಿ ಸುರೇಶ ಪತ್ತಾರ ಮತ್ತು ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 