ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ
Shifting stray cattle to Goshala
ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ
ಗದಗ 25: ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿ ಹೆಚ್ಚಾಗಿರುವ ಕುರಿತು ದೂರುಗಳು ನಗರಸಭೆಗೆ ಸ್ವೀಕೃತವಾಗಿದ್ದು ಹಾಗೂ ಸಾರ್ವಜನಿಕರಿಗೆ ಬೀದಿ ದನಗಳ ಹಾವಳಿಯಿಂದ ತೊಂದರೆಉಂಟಾಗಿರುವ ಘಟನೆಗಳನ್ನ ಆಧರಿಸಿ ಗದಗ-ಬೆಟಗೇರಿ ನಗರಸಭೆ ವತಿಯಿಂದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲಿಕ್ಕೆ ನಿರ್ಣಯಿಸಲಾಗಿದೆ. ಇಲ್ಲಿಯವರೆಗೂ ಬೆಟಗೇರಿ ಭಾಗದ ಮಾರುಕಟ್ಟೆ ಪ್ರದೇಶದಲ್ಲಿ ಬೀದಿ ದನಗಳ ಹಿಡಿಯುವ ಕಾರ್ಯಚರಣೆ ನಡೆಸಿ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರಕ್ಕೆ ಒಟ್ಟು 80 ಬೀದಿ ದನಗಳನ್ನು ಹಿಡಿದು ಗೋಶಾಲೆಗಳಿಗೆ ರವಾನಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಸಭೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆನಂದಯ ಬದಿ, ಬೆಟಗೇರಿ ಪೋಲಿಸ್ ಠಾಣೆ ಉಪ ನೀರೀಕ್ಷಕ ಲಕ್ಷ್ಮಣ, ಹಿರಿಯಆರೋಗ್ಯ ನೀರೀಕ್ಷಕ ಎಂ.ಎಂ ಮಕಾಂದರ ಹಾಗೂ ನಗರಸಭೆಯ ಸಿಬ್ಬಂದಿಗಳಾದ ಕೆಂಚಪ್ಪ ಪೂಜಾರ, ವಾಸು ಹಾದಿಮನಿ ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 