ಶಿರಹಟ್ಟಿ: ಮಕ್ಕಳಿಗೆ ಪಠ್ಯ ಪುಸ್ತಕಗಳ ವಿತರಣೆ
ಲೋಕದರ್ಶನ ವರದಿ
ಶಿರಹಟ್ಟಿ 31: ಪಟ್ಟಣದ ಹೃದಯ ಭಾಗದಲ್ಲಿರುವ ಸರಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಸಮನ್ವಯಾಧಿಕಾರಿ ವಾಯ್.ಎಚ್.ನದಾಫ್ ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅವುಗಳೆಲ್ಲದರ ಲಾಭವನ್ನು ಪಡೆದು ಮಕ್ಕಳು ವಿದ್ಯಾವಂತರಾಗಿ ದೇಶದ ಆಸ್ತಿಯಾಗಬೇಕು ಎಂದು ಹೇಳಿದರು.
ನಂತರ ಎಸ್.ಡಿ.ಎಮ್.ಸಿ ಅಧ್ಯಕ್ಷ ಗುಡದಯ್ಯ ನೀಲಣ್ಣನವರ ಹಾಗೂ ಈರಣ್ಣ ಕೋಟಿ ಮಾತನಾಡಿ ಇಂದಿನ ದುಬಾರಿ ಕಾಲದಲ್ಲಿ ಮಕ್ಕಳಿಗೆ ಪಾಲಕರು ಪಠ್ಯ ಪುಸ್ತಕಗಳನ್ನು ಖರೀದಿಸಲಾಗದೆ ಮಕ್ಕಳು ವಿದ್ಯಾರ್ಜನೆಯಿಂದ ವಂಚಿತರಾಗ ಬಾರದು ಎಂಬ ಮಹತ್ತರ ಉದ್ದೇಶದಿಂದ ಇಂದು ಸರಕಾರ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕ, ಶಾಲಾ ಸಮವಸ್ತ್ರ ಹೀಗೆ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಕಾರಣ ಮಕ್ಕಳು ಇವುಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾವಂತರಾಗಿ ಶಾಲೆಗೂ ಹಾಗೂ ದೇಶಕ್ಕೂ ಕೀತರ್ಿಯನ್ನು ತರಬೇಕು ಎಂದು ಹೇಳಿದರು.
ಬಿಆರ್ಪಿ ಎನ್.ಎಸ್.ಬಂಕಾಪೂರ, ಸಿಆರ್ಪಿ ಎಚ್.ಎನ್.ಪಾಟೀಲ್, ಶಾಲೆಯ ಪಾಲಕರ ಪ್ರತಿನಿಧಿ ವಿರಣ್ಣ ಕೋರಿ, ಎಚ್.ಬಿ.ಸಣ್ಣಮನಿ, ಎಸ್.ಎಸ್.ಕುಬೇರ, ಗೀತಾ ಸರವಿ, ವೀಣಾ ಗುಡಿ, ವೆಂಕಟೇಶ ಪಾಟೀಲ ಹಾಗೂ ಸಹ ಶಿಕ್ಷಕಿಯರು ಮತ್ತು ಶಾಲಾ ವಿದ್ಯಾಥರ್ಿನಿಯರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 