ಶಿವಶಂಕರ ಸ್ವಾಮೀಜಿಯವರು ಹೃದಯಾಘಾತದಿಂದ ನಿಧನ
Shiva Shankara Swamiji passes away due to heart attack
ರಾಯಬಾಗ, 21 : ತಾಲೂಕಿನ ಬಾವನಸೌಂದತ್ತಿ ಗ್ರಾಮದ ಓಂಕಾರ ಆಶ್ರಮದ ಶಿವಶಂಕರ ಸ್ವಾಮೀಜಿ (63) ಬುಧವಾರ ಬೆಳಗಿನ ಜಾವ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ (63) ನಿಧನರಾದರು.
ಗುರುವಾರ ಬೆಳಿಗ್ಗೆ 8 ಗಂಟೆವರೆಗೆ ಪೂಜ್ಯರ ಅಂತಿಮ ದರ್ಶನಕ್ಕಾಗಿ ಮಹಾದೇವ ಆವರಣದಲ್ಲಿ ಇಡಲಾಗುವುದು. ನಂತರ 8.30 ರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ನಂತರ 10.30 ಕ್ಕೆ ವೀರಶೈವ ಲಿಂಗಾಯತ ವಿಧಿವಿಧಾನದ ಪ್ರಕಾರ ಓಂಕಾರ ಆಶ್ರಮದ ಆವರಣದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಗುವುದು ಎಂದು ಗಾ.್ರಪಂ ಸದಸ್ಯ ಧೂಳಗೌಡ ಪಾಟೀಲ ಹೇಳಿದರು.
ನಂದಿಕುರಳಿಯ ಪಂಚಲಿಂಗೇಶ್ವರ ವೀರಭದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮಾಜದ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನದ ಬಗ್ಗೆ ನಿರ್ಧರಿಸಲಾಯಿತು.
ಶಂಕರಾನಂದ ಸ್ವಾಮೀಜಿ, ಗ್ರಾ.ಪಂ ಅಧ್ಯಕ್ಷ ರಾಮಚಂದ್ರ ಕಾಟೆ, ಸತ್ಯಪ್ಪ ಬಿಷ್ಠೆ, ತಾತ್ಯಾಸಾಹೇಬ ಕಾಟೆ, ಅನೀಲ ಹಂಜೆ, ಚಿದಾನಂದ ಮಂಗಸೂಳೆ, ಪ್ರಕಾಶ ಬಿಷ್ಠೆ, ಕಾಕಾಸಾಹೇಬ ತಡಾಕೆ, ಮಾರುತಿ ಚೌಗುಲೆ, ಅಜೀತ ಕಾಮುಗೊಂಡ, ಜಯಕುಮಾರ ಖೆಮಲಾಪುರೆ, ಅಜೀತ ಗೌರಾಜ, ಸತೀಶ ಮಂಗಸೂಳೆ, ಕುಮಾರ ಕುಂಬಾರ, ರಾಜಗೌಡ ಪಾಟೀಲ ಸೇರಿ ಅನೇಕರು ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 