ಶಿವಶಂಕರ ಸ್ವಾಮೀಜಿಯವರು ಹೃದಯಾಘಾತದಿಂದ ನಿಧನ
Shiva Shankara Swamiji passes away due to heart attack
ರಾಯಬಾಗ, 21 : ತಾಲೂಕಿನ ಬಾವನಸೌಂದತ್ತಿ ಗ್ರಾಮದ ಓಂಕಾರ ಆಶ್ರಮದ ಶಿವಶಂಕರ ಸ್ವಾಮೀಜಿ (63) ಬುಧವಾರ ಬೆಳಗಿನ ಜಾವ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ (63) ನಿಧನರಾದರು.
ಗುರುವಾರ ಬೆಳಿಗ್ಗೆ 8 ಗಂಟೆವರೆಗೆ ಪೂಜ್ಯರ ಅಂತಿಮ ದರ್ಶನಕ್ಕಾಗಿ ಮಹಾದೇವ ಆವರಣದಲ್ಲಿ ಇಡಲಾಗುವುದು. ನಂತರ 8.30 ರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ನಂತರ 10.30 ಕ್ಕೆ ವೀರಶೈವ ಲಿಂಗಾಯತ ವಿಧಿವಿಧಾನದ ಪ್ರಕಾರ ಓಂಕಾರ ಆಶ್ರಮದ ಆವರಣದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಗುವುದು ಎಂದು ಗಾ.್ರಪಂ ಸದಸ್ಯ ಧೂಳಗೌಡ ಪಾಟೀಲ ಹೇಳಿದರು.
ನಂದಿಕುರಳಿಯ ಪಂಚಲಿಂಗೇಶ್ವರ ವೀರಭದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮಾಜದ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನದ ಬಗ್ಗೆ ನಿರ್ಧರಿಸಲಾಯಿತು.
ಶಂಕರಾನಂದ ಸ್ವಾಮೀಜಿ, ಗ್ರಾ.ಪಂ ಅಧ್ಯಕ್ಷ ರಾಮಚಂದ್ರ ಕಾಟೆ, ಸತ್ಯಪ್ಪ ಬಿಷ್ಠೆ, ತಾತ್ಯಾಸಾಹೇಬ ಕಾಟೆ, ಅನೀಲ ಹಂಜೆ, ಚಿದಾನಂದ ಮಂಗಸೂಳೆ, ಪ್ರಕಾಶ ಬಿಷ್ಠೆ, ಕಾಕಾಸಾಹೇಬ ತಡಾಕೆ, ಮಾರುತಿ ಚೌಗುಲೆ, ಅಜೀತ ಕಾಮುಗೊಂಡ, ಜಯಕುಮಾರ ಖೆಮಲಾಪುರೆ, ಅಜೀತ ಗೌರಾಜ, ಸತೀಶ ಮಂಗಸೂಳೆ, ಕುಮಾರ ಕುಂಬಾರ, ರಾಜಗೌಡ ಪಾಟೀಲ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 